ಬ್ರೇಕಿಂಗ್ ನ್ಯೂಸ್
19-08-25 09:27 pm Bangalore Correspondent ಕ್ರೈಂ
ಬೆಂಗಳೂರು, ಆ 19 : ವೈದ್ಯೆಯ ಮನೆಯಲ್ಲಿ ಚಿನ್ನಾಭರಣ ಹಾಗೂ ದುಬಾರಿ ವಸ್ತುಗಳನ್ನ ಕಳ್ಳತನ ಮಾಡಿದ್ದ ಮನೆ ಕೆಲಸದಾಕೆ ಸೇರಿದಂತೆ ಇಬ್ಬರನ್ನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಕಾಕಿನಾಡ ಮೂಲದ ದುರ್ಗಾ ಅನ್ನಾರೆಡ್ಡಿ ಬಂಧಿತ ಆರೋಪಿ. ಆಕೆಯಿಂದ ಡೈಮಂಡ್ ಮತ್ತು ಚಿನ್ನದ ಆಭರಣಗಳು, ಬೆಳ್ಳಿಯ ವಸ್ತು, ಮೊಬೈಲ್ ಫೋನ್ ಹಾಗೂ ಬೆಲೆ ಬಾಳುವ ವಾಚ್ಗಳು ಸೇರಿದಂತೆ 22 ಲಕ್ಷ ರೂ. ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಯನಗರ 1ನೇ ಬ್ಲಾಕ್ನಲ್ಲಿ ವಾಸವಿದ್ದ ಖಾಸಗಿ ಆಸ್ಪತ್ರೆಯ ವೈದ್ಯೆಯೊಬ್ಬರು ಕಳೆದ ಒಂದೂವರೆ ವರ್ಷದ ಹಿಂದೆ ಆಂಧ್ರಪ್ರದೇಶ ಮೂಲದ ಏಜೆನ್ಸಿಯೊಂದರ ಮೂಲಕ ದುರ್ಗಾ ಅನ್ನಾರೆಡ್ಡಿಯನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಇತ್ತೀಚಿಗೆ ಅನಾರೋಗ್ಯಕ್ಕೀಡಾಗಿದ್ದ ಮನೆ ಮಾಲೀಕರಿಗೆ ಆಗಾಗ ವಿಶ್ರಾಂತಿಯ ಅಗತ್ಯ ಇರುತ್ತಿತ್ತು. ಜುಲೈ 28ರಂದು ಅದೇ ರೀತಿ ವಿಶ್ರಾಂತಿ ಪಡೆದು ಸಂಜೆ ಎದ್ದು ನೋಡಿದಾಗ ಮನೆ ಕೆಲಸದಾಕೆ ದುರ್ಗಾ ಕಾಣಿಸಿರಲಿಲ್ಲ. ಕರೆ ಮಾಡಿದಾಗ ಆಕೆಯ ಫೋನ್ ಸ್ವಿಚ್ಡ್ ಆಫ್ ಆಗಿತ್ತು. ಅನುಮಾನಗೊಂಡು ಮನೆಯಲ್ಲಿರುವ ಕಬೋರ್ಡ್ ನೋಡಿದಾಗ ಡೈಮಂಡ್, ಚಿನ್ನಾಭರಣ, ಬೆಳ್ಳಿಯ ವಸ್ತುಗಳು, ಮೊಬೈಲ್ ಫೋನ್ಗಳು, ಬೆಲೆಬಾಳುವ ವಾಚ್ಗಳು ಕಾಣೆಯಾಗಿದ್ದವು. ತಕ್ಷಣ ಅವರು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಕೈಗೊಂಡ ಸಿದ್ದಾಪುರ ಠಾಣೆ ಪೊಲೀಸರು ತೆಲಂಗಾಣದ ನ್ಯೂ ರಂಗಪುರ್ ಗ್ರಾಮದಲ್ಲಿದ್ದ ತನ್ನ ಸಹೋದರಿಯ ಮನೆಯಲ್ಲಿದ್ದ ದುರ್ಗಾಳನ್ನ ಬಂಧಿಸಿದ್ದರು. ವಿಚಾರಣೆಗೊಳಪಡಿಸಿದಾಗ ಕದ್ದ ಕೆಲ ವಸ್ತುಗಳನ್ನ ಆಕೆ ತನ್ನ ಸಹೋದರಿಯ ಗಂಡನ ಮೂಲಕ ಮಾರಾಟ ಮಾಡಿಸಿರುವುದಾಗಿ ತಪ್ಪೊಪ್ಪಿಕೊಂಡಿದ್ದಳು. ಬಳಿಕ ಆರೋಪಿಯ ತಂಗಿಯ ಗಂಡನನ್ನ ಸಹ ಬಂಧಿಸಲಾಗಿದೆ. ಆರೋಪಿಗಳಿಬ್ಬರ ಬಂಧನದಿಂದ ಒಟ್ಟು 5.40 ಗ್ರಾಂ ಡೈಮಂಡ್ ರಿಂಗ್, 10.45 ಗ್ರಾಂ ಡೈಮಂಡ್ ಓಲೆ, 11.50 ಗ್ರಾಂ ಚಿನ್ನಾಭರಣ, 1 ಕೆ.ಜಿ 62 ಗ್ರಾಂ ಬೆಳ್ಳಿಯ ವಸ್ತುಗಳು, 4 ಮೊಬೈಲ್ ಫೋನ್ಗಳು, 5 ಬೆಲೆಬಾಳುವ ವಾಚ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A housemaid who robbed her employer — a doctor residing in Bengaluru — has been arrested by Siddapura Police along with an accomplice. The police have recovered valuables worth ₹22 lakh, including gold and diamond jewellery, silver items, mobile phones, and luxury watches.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm