ಬ್ರೇಕಿಂಗ್ ನ್ಯೂಸ್
19-08-25 10:52 pm Mangalore Correspondent ಕ್ರೈಂ
ಮಂಗಳೂರು, ಆ.19 : ಸುರತ್ಕಲ್ ನಲ್ಲಿ ಲಕ್ಕಿ ಸ್ಕೀಮ್ ನಡೆಸುತ್ತಿದ್ದ ಮತ್ತೊಬ್ಬ ಸಾವಿರಾರು ಜನರಿಗೆ ಮೋಸ ಮಾಡಿ ದುಬೈಗೆ ಹಾರಿದ್ದಾನೆ. ವಫಾ ಹೆಸರಿನಲ್ಲಿ ಲಕ್ಕಿ ಸ್ಕೀಮ್ ನಡೆಸುತ್ತಿದ್ದ ಅಬ್ದುಲ್ ವಹಾಬ್ ಕುಳಾಯಿ ಎಂಬಾತ ಹಣ ಕೊಡಲಾಗದೆ ಊರು ಬಿಟ್ಟು ದುಬೈಗೆ ಹಾರಿದ್ದು, ಅಲ್ಲಿಂದ ವಿಡಿಯೋ ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ಬೇಸತ್ತ ಗ್ರಾಹಕರು ಸುರತ್ಕಲ್ ನಲ್ಲಿರುವ ಆತನ ಮಳಿಗೆಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ನ್ಯೂ ಇಂಡಿಯಾ ರಾಯಲ್ ಹೆಸರಿನಲ್ಲಿ ಲಕ್ಕಿ ಸ್ಕೀಮ್ ಹೆಸರಲ್ಲಿ ಹತ್ತು ಕೋಟಿಗೂ ಹೆಚ್ಚು ವಂಚನೆ ನಡೆಸಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೇ ಮಾದರಿಯ ಲಕ್ಕಿ ಸ್ಕೀಮ್ ನಡೆಸುತ್ತಿದ್ದ ವಹಾಬ್ ಕುಳಾಯಿ ನಾಪತ್ತೆಯಾಗಿದ್ದಾನೆ. ತಿಂಗಳಿಗೆ ಒಂದು ಸಾವಿರದಂತೆ ಹಣ ಪಡೆದು ಪ್ರತಿ ತಿಂಗಳು ಡ್ರಾದಲ್ಲಿ ದುಬಾರಿ ಫ್ಲಾಟ್, ಕಾರು ಕೊಡಿಸುವುದಾಗಿ ಹೇಳಿ ಜನರನ್ನು ಯಾಮಾರಿಸಿದ್ದು, ಕಳೆದ ಮೂರು ವರ್ಷದಲ್ಲಿ ಐದು ಸೀಸನ್ ಲಕ್ಕಿ ಸ್ಕೀಮ್ ನಡೆಸಿದ್ದಾಗಿ ಗ್ರಾಹಕರು ಹೇಳುತ್ತಿದ್ದಾರೆ.




ವಫಾ ಲಕ್ಕಿ ಸ್ಕೀಮ್ ಯೋಜನೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನರಿದ್ದು, ಅವರಿಂದ ಪಡೆದ ಹಣದಲ್ಲಿ ವಹಾಬ್ ಬಜ್ಪೆ, ಸುರತ್ಕಲ್, ಕೃಷ್ಣಾಪುರದಲ್ಲಿ ಬೇರೆ ಬೇರೆ ಉದ್ಯಮ ಆರಂಭಿಸಿದ್ದ. ವಫಾ ಫರ್ನಿಚರ್, ಇಲೆಕ್ಟ್ರಾನಿಕ್ಸ್ ಶಾಪ್, ಗೋಲ್ಡ್ ಅಂಡ್ ಡೈಮಂಡ್ಸ್ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದ. ಸುರತ್ಕಲ್, ಬಜ್ಪೆ, ಕಾಪು, ಕೃಷ್ಣಾಪುರದಲ್ಲಿ ಈತನ ಮಳಿಗೆ ಇದ್ದವು. ಮೊನ್ನೆ ಭಾನುವಾರ ಸುರತ್ಕಲ್ ನಲ್ಲಿದ್ದ ಗೋಲ್ಡ್ ಅಂಡ್ ಡೈಮಂಡ್ಸ್ ಕಚೇರಿಗೆ ನುಗ್ಗಿದ ಗ್ರಾಹಕರು ವಹಾಬ್ ಬಗ್ಗೆ ಪ್ರಶ್ನಿಸಿ ರಂಪ ಮಾಡಿದ್ದಾರೆ. ಲಕ್ಕಿ ಸ್ಕೀಮ್ ನಲ್ಲಿ ಹಣ ಕಟ್ಟಿ ಹತ್ತು ತಿಂಗಳಾದರೂ ಹಣ ಕೊಟ್ಟಿಲ್ಲ ಎಂದು ಗಲಾಟೆ ಮಾಡಿದ್ದಾರೆ. ಆದರೆ ವಹಾಬ್ ಕುಳಾಯಿ ದುಬೈನಲ್ಲಿ ವಿಡಿಯೋ ಮಾಡಿದ್ದು, ನಾವು ಹಣ ಕೊಡುತ್ತೇವೆ, ಜನರು ತಾಳ್ಮೆಯಲ್ಲಿರಿ, ನಮ್ಮದು ದುಬೈನಲ್ಲೂ ಬಿಸಿನೆಸ್ ಇದೆ, ಅದಕ್ಕಾಗಿ ಬಂದಿದ್ದೇನೆ ಎಂದು ಹೇಳುತ್ತಿದ್ದಾನೆ.
ನ್ಯೂ ಇಂಡಿಯಾ ರಾಯಲ್ ಹೆಸರಲ್ಲಿಯೂ ಮೊಹಮ್ಮದ್ ಅಶ್ರಫ್ ಎಂಬಾತ ಇದೇ ರೀತಿ ನಿಗೂಢ ಜಾಗದಲ್ಲಿದ್ದುಕೊಂಡು ವಿಡಿಯೋ ಮಾಡುತ್ತಿದ್ದ. ಆನಂತರ, ಕೇಸು ದಾಖಲಾದ ಬಳಿಕ ಪೊಲೀಸರು ಅರೆಸ್ಟ್ ಮಾಡಿದ್ದರು. ವಹಾಬ್ ಬಳಿ ಸಾಕಷ್ಟು ದುಡ್ಡಿದೆ ಎಂದು ಹೇಳಲಾಗುತ್ತಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಂದ 3-4 ವರ್ಷದಲ್ಲಿ ಹಣ ಕಟ್ಟಿಸಿಕೊಂಡು ಮೂರು ನಾಮ ಹಾಕಿದ್ದಾನೆ. ಇಂತಹ ಹಲವಾರು ಲಕ್ಕಿ ಸ್ಕೀಮ್ ಗಳಿದ್ದು, ಜನರನ್ನು ಮೋಸ ಮಾಡುವುದು ನಡೆಯುತ್ತಿದ್ದರೂ ಮಂಗಳೂರು ಪೊಲೀಸರು ಸುಮ್ಮನಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಬಳಿ ಕೇಳಿದಾಗ, ನಾವು ಏಕ್ಷನ್ ಮಾಡುತ್ತೇವೆ, ಇದರ ಬಗ್ಗೆ ಆರಂಭದಲ್ಲಿಯೇ ಮಾಡಬೇಕಿತ್ತು. ಯಾವುದೇ ಲೈಸನ್ಸ್ ಇಲ್ಲದೆ ಹೇಗೆ ಹಣ ಕಲೆಕ್ಷನ್ ಮಾಡಿದ್ದಾರೆ ಎಂದು ಹೇಳುತ್ತಾರೆ.
Yet another major “lucky scheme” fraud has surfaced in Surathkal, with thousands of investors alleging they were cheated of crores of rupees by a businessman who has now fled to Dubai. The accused, identified as Abdul Wahab from Kulai, reportedly ran the “Wafa Lucky Scheme,” collecting money from over 20,000 members with promises of monthly prize draws offering luxury flats and cars. Customers allege that Wahab conducted at least five seasons of the scheme over the last three years, each time luring more participants.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm