ಬ್ರೇಕಿಂಗ್ ನ್ಯೂಸ್
20-08-25 08:10 pm Mangalore Correspondent ಕ್ರೈಂ
ಮಂಗಳೂರು, ಆ.20: ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ ಬ್ಯಾಂಕ್ ಕಳ್ಳತನ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯಲ್ಲಿ ಮಾರ್ಚ್ 29ರಂದು ರಾತ್ರಿ ಮುತ್ತೂಟ್ ಫೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆದಿತ್ತು. ದೇರಳಕಟ್ಟೆ ಪರಿಸರದಲ್ಲಿ ಹೆಚ್.ಎಮ್ ಕಾಂಪ್ಲೆಕ್ಸ್ ನ ಮುತ್ತೂಟ್ ಫೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಕೇಬಲನ್ನು ತುಂಡು ಮಾಡಿ ಕಳವು ಮಾಡಲು ಪ್ರಯತ್ನ ಮಾಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 42/2025 ಕಲಂ: 331[40], 305, 62, 13 BNS ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್ ನ ಆರ್ಷದ್ ಎಂಬವರನ್ನು ಆಗಲೇ ಬಂಧಿಸಲಾಗಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಕಾಸರಗೋಡು ಜಿಲ್ಲೆಯ ವೆಲ್ಲರಿಕುಂಡು ನಿವಾಸಿ ಅಬ್ದುಲ್ ಲತೀಫ್ (47) ಎಂಬಾತನನ್ನು ವಶಕ್ಕೆ ಪಡೆದು ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಅಬ್ದುಲ್ ಲತೀಫ್ ಎಂಬಾತನ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಠಾಣೆ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್ ನಲ್ಲಿ ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣ ದಾಖಲಾಗಿದೆ. ಬಂಧನ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
In a major breakthrough, Mangaluru CCB police have arrested a notorious Kerala-based accused in connection with an attempted robbery at Muthoot Finance in Derlakatte.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am