ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm