ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm