ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm