ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm