ಬ್ರೇಕಿಂಗ್ ನ್ಯೂಸ್
24-08-25 04:00 pm HK News Desk ಕ್ರೈಂ
ನವದೆಹಲಿ, ಆ.24 : ಇಲ್ಲಿನ ಗ್ರೇಟರ್ ನೋಯ್ಡಾ ನಗರದಲ್ಲಿ ವಿವಾಹಿತ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಆರೋಪದಲ್ಲಿ ಜೈಲು ಸೇರಿರುವ ವಿಪಿನ್ ಭಾಟಿ ಎಂಬಾತ ಜೈಲಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
36 ಲಕ್ಷ ರೂಪಾಯಿ ವರದಕ್ಷಿಣೆ ಹಣಕ್ಕಾಗಿ ಪೀಡಿಸಿ ನಿಕ್ಕಿ ಭಾಟಿ ಎಂಬ ಮಹಿಳೆಯನ್ನು ಪತಿ ಮತ್ತು ಆತನ ಮನೆಯವರು ಬೆಂಕಿ ಹಚ್ಚಿ ಕೊಲೆ ಮಾಡಿದ್ದರು ಎಂದು ಮಹಿಳೆಯ ಸೋದರಿ ಕಾಂಚನ ಪೊಲೀಸ್ ದೂರು ನೀಡಿದ್ದರು. 2016ರಲ್ಲಿ ನಿಕ್ಕಿ ಮತ್ತು ವಿಪಿನ್ ಮದುವೆಯಾಗಿದ್ದು, ಈಕೆಯ ಸೋದರಿ ಕಾಂಚನ, ವಿಪಿನ್ ಸಹೋದರ ರೋಹಿತ್ ಎಂಬಾತನನ್ನು ವರಿಸಿ ಒಂದೇ ಮನೆಯಲ್ಲಿ ನೆಲೆಸಿದ್ದರು. ಕಳೆದ ಗುರುವಾರ ವರದಕ್ಷಿಣೆ ಹಣ ತರುವಂತೆ ಪೀಡಿಸಿ ವಿಪಿನ್ ಮತ್ತು ಆತನ ತಾಯಿ ದಯಾ ಎಂಬುವವರು ಸೇರಿ ನಿಕ್ಕಿಗೆ ಹಲ್ಲೆ ನಡೆಸಿದ್ದರು. ಇದನ್ನು ಪ್ರಶ್ನಿಸಿದ ಕಾಂಚನ ಅವರಿಗೂ ಹಿಗ್ಗಾಮುಗ್ಗ ಬಾರಿಸಿ, ನಿಕ್ಕಿಗೆ ಬೆಂಕಿ ಹಚ್ಚಿದ್ದರು. ಈ ದೃಶ್ಯ ಕಾಂಚನ ಅವರ ಮೊಬೈಲ್ ನಲ್ಲಿ ಸೆರೆಯಾಗಿತ್ತು. ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ನಿಕ್ಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಬಗ್ಗೆ ಕಾಂಚನ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವಿಪಿನ್ ನನ್ನು ಪೊಲೀಸರು ಬಂಧಿಸಿದ್ದರು.

![]()

ಈ ಮಧ್ಯೆ ಭಾನುವಾರ ಬೆಳಗ್ಗೆ ಮೃತ ನಿಕ್ಕಿ ಅವರ ತಂದೆ ಭಿಕಾರಿ ಸಿಂಗ್ ಪಾಯ್ಲಾ ಮಾಧ್ಯಮವೊಂದಕ್ಕೆ ನೀಡಿದ ಹೇಳಿಕೆಯಲ್ಲಿ ನನ್ನ ಮಗಳ ಹತ್ಯೆಯಲ್ಲಿ ವಿಪಿನ್ ನ ಇಡೀ ಕುಟುಂಬವೇ ಭಾಗಿಯಾಗಿದೆ. ಅವರನ್ನು ಎನ್ಕೌಂಟರ್ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಇದಾದ ಒಂದು ಗಂಟೆಯಲ್ಲೇ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪದಲ್ಲಿ ಪೊಲೀಸರು ವಿಪಿನ್ ಕಾಲಿಗೆ ಗುಂಡೇಟು ಹೊಡೆದಿದ್ದಾರೆ. ಇದನ್ನು ಪ್ರಶ್ನಿಸಿರುವ ಮಹಿಳೆಯ ತಂದೆ ಆತನ ಎದೆಗೆ ಗುಂಡು ಹೊಡೆದು ಎನ್ಕೌಂಟರ್ ಮಾಡಬೇಕಿತ್ತು ಎಂದು ಹೇಳಿದ್ದಾರೆ.
A man accused of setting his wife ablaze over a dowry demand of ₹36 lakh was shot in his leg by police while fleeing custody on Sunday in Greater Noida, an officer said.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm