ಬ್ರೇಕಿಂಗ್ ನ್ಯೂಸ್
24-08-25 06:36 pm Mangalore Correspondent ಕ್ರೈಂ
ಮಂಗಳೂರು, ಆ.24: ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಸಹಕಾರ ನೀಡಿದ ಘಟನೆ ನಡೆದಿದ್ದು, ಬರ್ಕೆ ಠಾಣೆ ಪೊಲೀಸರು ಜೈಲು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಜೈಲು ಸಿಬ್ಬಂದಿ.
ಆ.22ರಂದು ಬೆಳಗ್ಗೆ 10.40ಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಸಂದರ್ಭ ಎಂದಿನಂತೆ ಮುಖ್ಯ ದ್ವಾರದಲ್ಲಿ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸಂತೋಷ್ ಅವರ ಒಳ ಉಡುಪಿನಲ್ಲಿ ಅನುಮಾನಾಸ್ಪದ ವಸ್ತುವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸಮ್ಮುಖದಲ್ಲಿ ಕೂಲಂಕುಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಅವರ ಒಳ ಉಡುಪಿನಲ್ಲಿ ಖಾಕಿ ಬಣ್ಣದ ಗಮ್ ಟೇಪ್ ನಿಂದ ಸುತ್ತಿದ ಪೊಟ್ಟಣ ದೊರೆತಿದೆ.
ಜೈಲು ಅಧೀಕ್ಷಕ ಶರಣ ಬಸಪ್ಪ ಮತ್ತು ಕೆಎಸ್ಐಎಸ್ಎಫ್ ಸಹಾಯಕ ಕಮಾಂಡೆಂಟ್ ಸಮ್ಮುಖ ತೆರೆದು ನೋಡಿದಾಗ ಅದರಲ್ಲಿ ಅಂದಾಜು 41 ಗ್ರಾಂನಷ್ಟು ಗಾಂಜಾದಂತೆ ಕಾಣುವ ವಸ್ತು, ಅಂದಾಜು 11 ಗ್ರಾಂನಷ್ಟು ತಂಬಾಕು, 1 ಮೊಬೈಲ್ ಚಾರ್ಜರ್ ಕೇಬಲ್, ಒಂದು ಒಟಿಜಿ, ಒಂದು ಸಣ್ಣ ನಳಿಕೆ ರೂಪದ ಲೋಹದ ವಸ್ತು, ರೋಲಿಂಗ್ ಪೇಪರ್ ಗಳು ಪತ್ತೆಯಾಗಿವೆ.
ಈ ಬಗ್ಗೆ ಸಿಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬಿಜೈನಲ್ಲಿರುವ ಸೂಪರ್ ಮಾರ್ಕೆಟ್ ಬಳಿ ವ್ಯಕ್ತಿಯೊಬ್ಬ ತನಗೆ ಅದನ್ನು ನೀಡಿದ್ದು ಜೈಲಿನಲ್ಲಿ ವಿಚಾರಣಾಧೀನ ಕೈದಿ ಪ್ರಮೋದ ಎಂಬಾತನಿಗೆ ನೀಡುವಂತೆ ತಿಳಿಸಿದ್ದು, ಅದರಂತೆ ನೀಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಗಾಂಜಾ ಸಾಗಾಟ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಜೈಲು ಅಧೀಕ್ಷಕ ಶರಣ ಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of drug smuggling has come to light at the District Prison in Kodialbail, Mangaluru, where a jail staff member was caught attempting to supply ganja to inmates. The accused, identified as Santosh, was arrested by Barke police following the discovery.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm