ಬ್ರೇಕಿಂಗ್ ನ್ಯೂಸ್
24-08-25 06:36 pm Mangalore Correspondent ಕ್ರೈಂ
ಮಂಗಳೂರು, ಆ.24: ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಸಹಕಾರ ನೀಡಿದ ಘಟನೆ ನಡೆದಿದ್ದು, ಬರ್ಕೆ ಠಾಣೆ ಪೊಲೀಸರು ಜೈಲು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಜೈಲು ಸಿಬ್ಬಂದಿ.
ಆ.22ರಂದು ಬೆಳಗ್ಗೆ 10.40ಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಸಂದರ್ಭ ಎಂದಿನಂತೆ ಮುಖ್ಯ ದ್ವಾರದಲ್ಲಿ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸಂತೋಷ್ ಅವರ ಒಳ ಉಡುಪಿನಲ್ಲಿ ಅನುಮಾನಾಸ್ಪದ ವಸ್ತುವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸಮ್ಮುಖದಲ್ಲಿ ಕೂಲಂಕುಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಅವರ ಒಳ ಉಡುಪಿನಲ್ಲಿ ಖಾಕಿ ಬಣ್ಣದ ಗಮ್ ಟೇಪ್ ನಿಂದ ಸುತ್ತಿದ ಪೊಟ್ಟಣ ದೊರೆತಿದೆ.
ಜೈಲು ಅಧೀಕ್ಷಕ ಶರಣ ಬಸಪ್ಪ ಮತ್ತು ಕೆಎಸ್ಐಎಸ್ಎಫ್ ಸಹಾಯಕ ಕಮಾಂಡೆಂಟ್ ಸಮ್ಮುಖ ತೆರೆದು ನೋಡಿದಾಗ ಅದರಲ್ಲಿ ಅಂದಾಜು 41 ಗ್ರಾಂನಷ್ಟು ಗಾಂಜಾದಂತೆ ಕಾಣುವ ವಸ್ತು, ಅಂದಾಜು 11 ಗ್ರಾಂನಷ್ಟು ತಂಬಾಕು, 1 ಮೊಬೈಲ್ ಚಾರ್ಜರ್ ಕೇಬಲ್, ಒಂದು ಒಟಿಜಿ, ಒಂದು ಸಣ್ಣ ನಳಿಕೆ ರೂಪದ ಲೋಹದ ವಸ್ತು, ರೋಲಿಂಗ್ ಪೇಪರ್ ಗಳು ಪತ್ತೆಯಾಗಿವೆ.
ಈ ಬಗ್ಗೆ ಸಿಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬಿಜೈನಲ್ಲಿರುವ ಸೂಪರ್ ಮಾರ್ಕೆಟ್ ಬಳಿ ವ್ಯಕ್ತಿಯೊಬ್ಬ ತನಗೆ ಅದನ್ನು ನೀಡಿದ್ದು ಜೈಲಿನಲ್ಲಿ ವಿಚಾರಣಾಧೀನ ಕೈದಿ ಪ್ರಮೋದ ಎಂಬಾತನಿಗೆ ನೀಡುವಂತೆ ತಿಳಿಸಿದ್ದು, ಅದರಂತೆ ನೀಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಗಾಂಜಾ ಸಾಗಾಟ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಜೈಲು ಅಧೀಕ್ಷಕ ಶರಣ ಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of drug smuggling has come to light at the District Prison in Kodialbail, Mangaluru, where a jail staff member was caught attempting to supply ganja to inmates. The accused, identified as Santosh, was arrested by Barke police following the discovery.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm