ಬ್ರೇಕಿಂಗ್ ನ್ಯೂಸ್
24-08-25 06:36 pm Mangalore Correspondent ಕ್ರೈಂ
ಮಂಗಳೂರು, ಆ.24: ನಗರದ ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಜೈಲು ಸಿಬ್ಬಂದಿಯೇ ಕೈದಿಗಳಿಗೆ ಗಾಂಜಾ ಪೂರೈಕೆ ಮಾಡಲು ಸಹಕಾರ ನೀಡಿದ ಘಟನೆ ನಡೆದಿದ್ದು, ಬರ್ಕೆ ಠಾಣೆ ಪೊಲೀಸರು ಜೈಲು ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಸಂತೋಷ್ ಬಂಧಿತ ಜೈಲು ಸಿಬ್ಬಂದಿ.
ಆ.22ರಂದು ಬೆಳಗ್ಗೆ 10.40ಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಸಂದರ್ಭ ಎಂದಿನಂತೆ ಮುಖ್ಯ ದ್ವಾರದಲ್ಲಿ ಕೆಎಸ್ಐಎಸ್ಎಫ್ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದ ವೇಳೆ ಸಂತೋಷ್ ಅವರ ಒಳ ಉಡುಪಿನಲ್ಲಿ ಅನುಮಾನಾಸ್ಪದ ವಸ್ತುವನ್ನು ಬಚ್ಚಿಟ್ಟಿರುವುದು ಕಂಡುಬಂದಿದೆ. ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಅವರ ಸಮ್ಮುಖದಲ್ಲಿ ಕೂಲಂಕುಷವಾಗಿ ಪರಿಶೀಲನೆಗೆ ಒಳಪಡಿಸಿದಾಗ ಅವರ ಒಳ ಉಡುಪಿನಲ್ಲಿ ಖಾಕಿ ಬಣ್ಣದ ಗಮ್ ಟೇಪ್ ನಿಂದ ಸುತ್ತಿದ ಪೊಟ್ಟಣ ದೊರೆತಿದೆ.
ಜೈಲು ಅಧೀಕ್ಷಕ ಶರಣ ಬಸಪ್ಪ ಮತ್ತು ಕೆಎಸ್ಐಎಸ್ಎಫ್ ಸಹಾಯಕ ಕಮಾಂಡೆಂಟ್ ಸಮ್ಮುಖ ತೆರೆದು ನೋಡಿದಾಗ ಅದರಲ್ಲಿ ಅಂದಾಜು 41 ಗ್ರಾಂನಷ್ಟು ಗಾಂಜಾದಂತೆ ಕಾಣುವ ವಸ್ತು, ಅಂದಾಜು 11 ಗ್ರಾಂನಷ್ಟು ತಂಬಾಕು, 1 ಮೊಬೈಲ್ ಚಾರ್ಜರ್ ಕೇಬಲ್, ಒಂದು ಒಟಿಜಿ, ಒಂದು ಸಣ್ಣ ನಳಿಕೆ ರೂಪದ ಲೋಹದ ವಸ್ತು, ರೋಲಿಂಗ್ ಪೇಪರ್ ಗಳು ಪತ್ತೆಯಾಗಿವೆ.
ಈ ಬಗ್ಗೆ ಸಿಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ ಬಿಜೈನಲ್ಲಿರುವ ಸೂಪರ್ ಮಾರ್ಕೆಟ್ ಬಳಿ ವ್ಯಕ್ತಿಯೊಬ್ಬ ತನಗೆ ಅದನ್ನು ನೀಡಿದ್ದು ಜೈಲಿನಲ್ಲಿ ವಿಚಾರಣಾಧೀನ ಕೈದಿ ಪ್ರಮೋದ ಎಂಬಾತನಿಗೆ ನೀಡುವಂತೆ ತಿಳಿಸಿದ್ದು, ಅದರಂತೆ ನೀಡಲು ತಂದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಗಾಂಜಾ ಸಾಗಾಟ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಜೈಲು ಅಧೀಕ್ಷಕ ಶರಣ ಬಸಪ್ಪ ನೀಡಿದ ದೂರಿನಂತೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A shocking case of drug smuggling has come to light at the District Prison in Kodialbail, Mangaluru, where a jail staff member was caught attempting to supply ganja to inmates. The accused, identified as Santosh, was arrested by Barke police following the discovery.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm