ಬ್ರೇಕಿಂಗ್ ನ್ಯೂಸ್
24-08-25 10:33 pm HK News Desk ಕ್ರೈಂ
ಶಿವಮೊಗ್ಗ, ಆ.24 : ಇಬ್ಬರು ಯುವಕರ ಜೊತೆಗೆ ಸೇರಿ ತನ್ನ ಗಂಡನನ್ನೇ ಕಬ್ಬಿಣದ ರಾಡ್ ನಲ್ಲಿ ಹೊಡೆದು ಸಾಯಿಸಿ ಮೃತದೇಹವನ್ನು ಹೊಳೆಗೆ ಎಸೆದ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
2016ರ ಜುಲೈ 7ರಂದು ಕೊಲೆ ಕೃತ್ಯ ನಡೆದಿತ್ತು. ಲಕ್ಷ್ಮಿ ಎಂಬ ಮಹಿಳೆಯನ್ನು ಇಮ್ತಿಯಾಜ್ ಅಹ್ಮದ್ ಎಂಬಾತ ಘಟನೆಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ- ಪತ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಪತ್ನಿ ಲಕ್ಷ್ಮೀ ಗಂಡನನ್ನು ಕಬ್ಬಿಣದ ರಾಡ್ ನಲ್ಲಿ ಹೊಡೆಸಿ ಸಾಯಿಸಿದ್ದಳು ಎನ್ನಲಾಗಿದೆ. ಆನಂತರ, ಸಾಕ್ಷ್ಯ ಮುಚ್ಚಿ ಹಾಕುವುದಕ್ಕಾಗಿ ಅದೇ ಪರಿಸರದ ಶಿವಮೂರ್ತಿ ಹಾಗೂ ಕೃಷ್ಣಮೂರ್ತಿ ಎಂಬವರ ಜೊತೆಗೂಡಿ ಮೃತದೇಹವನ್ನು ಹೊಳೆಗೆ ಎಸೆದಿದ್ದಳು. ಇಮ್ತಿಯಾಜ್ ಸೋದರ ಎಜಾಜ್ ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದ ಬೆನ್ನತ್ತಿದ ಸಿಪಿಐಗಳಾದ ಪ್ರಭು ಬಿ. ಸೂರಿನ್ ಮತ್ತು ಚಂದ್ರಶೇಖರ್ ಟಿಕೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು 2025ರ ಆಗಸ್ಟ್ 23ರಂದು ತೀರ್ಪು ನೀಡಿದ್ದಾರೆ. ಆರೋಪಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ 37 ವರ್ಷದ ಲಕ್ಷ್ಮೀ ಮತ್ತು ಕೃಷ್ಣಮೂರ್ತಿ (38) ಅವರಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಶಿವರಾಜು (40) ಗೆ 7 ವರ್ಷಗಳ ಶಿಕ್ಷೆಯನ್ನು ನೀಡಿ ತೀರ್ಪು ನೀಡಿದ್ದಾರೆ.
In a shocking murder case dating back to 2016, a Shivamogga court has awarded the death penalty to a woman and her accomplice for the brutal killing of her husband, a Muslim man. A third accused has been sentenced to seven years of imprisonment.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm