ಬ್ರೇಕಿಂಗ್ ನ್ಯೂಸ್
24-08-25 10:33 pm HK News Desk ಕ್ರೈಂ
ಶಿವಮೊಗ್ಗ, ಆ.24 : ಇಬ್ಬರು ಯುವಕರ ಜೊತೆಗೆ ಸೇರಿ ತನ್ನ ಗಂಡನನ್ನೇ ಕಬ್ಬಿಣದ ರಾಡ್ ನಲ್ಲಿ ಹೊಡೆದು ಸಾಯಿಸಿ ಮೃತದೇಹವನ್ನು ಹೊಳೆಗೆ ಎಸೆದ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
2016ರ ಜುಲೈ 7ರಂದು ಕೊಲೆ ಕೃತ್ಯ ನಡೆದಿತ್ತು. ಲಕ್ಷ್ಮಿ ಎಂಬ ಮಹಿಳೆಯನ್ನು ಇಮ್ತಿಯಾಜ್ ಅಹ್ಮದ್ ಎಂಬಾತ ಘಟನೆಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ- ಪತ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಪತ್ನಿ ಲಕ್ಷ್ಮೀ ಗಂಡನನ್ನು ಕಬ್ಬಿಣದ ರಾಡ್ ನಲ್ಲಿ ಹೊಡೆಸಿ ಸಾಯಿಸಿದ್ದಳು ಎನ್ನಲಾಗಿದೆ. ಆನಂತರ, ಸಾಕ್ಷ್ಯ ಮುಚ್ಚಿ ಹಾಕುವುದಕ್ಕಾಗಿ ಅದೇ ಪರಿಸರದ ಶಿವಮೂರ್ತಿ ಹಾಗೂ ಕೃಷ್ಣಮೂರ್ತಿ ಎಂಬವರ ಜೊತೆಗೂಡಿ ಮೃತದೇಹವನ್ನು ಹೊಳೆಗೆ ಎಸೆದಿದ್ದಳು. ಇಮ್ತಿಯಾಜ್ ಸೋದರ ಎಜಾಜ್ ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದ ಬೆನ್ನತ್ತಿದ ಸಿಪಿಐಗಳಾದ ಪ್ರಭು ಬಿ. ಸೂರಿನ್ ಮತ್ತು ಚಂದ್ರಶೇಖರ್ ಟಿಕೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು 2025ರ ಆಗಸ್ಟ್ 23ರಂದು ತೀರ್ಪು ನೀಡಿದ್ದಾರೆ. ಆರೋಪಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ 37 ವರ್ಷದ ಲಕ್ಷ್ಮೀ ಮತ್ತು ಕೃಷ್ಣಮೂರ್ತಿ (38) ಅವರಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಶಿವರಾಜು (40) ಗೆ 7 ವರ್ಷಗಳ ಶಿಕ್ಷೆಯನ್ನು ನೀಡಿ ತೀರ್ಪು ನೀಡಿದ್ದಾರೆ.
In a shocking murder case dating back to 2016, a Shivamogga court has awarded the death penalty to a woman and her accomplice for the brutal killing of her husband, a Muslim man. A third accused has been sentenced to seven years of imprisonment.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm