ಬ್ರೇಕಿಂಗ್ ನ್ಯೂಸ್
24-08-25 10:33 pm HK News Desk ಕ್ರೈಂ
ಶಿವಮೊಗ್ಗ, ಆ.24 : ಇಬ್ಬರು ಯುವಕರ ಜೊತೆಗೆ ಸೇರಿ ತನ್ನ ಗಂಡನನ್ನೇ ಕಬ್ಬಿಣದ ರಾಡ್ ನಲ್ಲಿ ಹೊಡೆದು ಸಾಯಿಸಿ ಮೃತದೇಹವನ್ನು ಹೊಳೆಗೆ ಎಸೆದ ಪ್ರಕರಣದಲ್ಲಿ ಮಹಿಳೆ ಸೇರಿ ಇಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಲಾಗಿದೆ. ಇನ್ನೊಬ್ಬ ವ್ಯಕ್ತಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಗಿದೆ.
2016ರ ಜುಲೈ 7ರಂದು ಕೊಲೆ ಕೃತ್ಯ ನಡೆದಿತ್ತು. ಲಕ್ಷ್ಮಿ ಎಂಬ ಮಹಿಳೆಯನ್ನು ಇಮ್ತಿಯಾಜ್ ಅಹ್ಮದ್ ಎಂಬಾತ ಘಟನೆಯ ಐದು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಆದರೆ ಪತಿ- ಪತ್ನಿ ನಡುವೆ ವೈಮನಸ್ಸು ಉಂಟಾಗಿದ್ದು, ಪತ್ನಿ ಲಕ್ಷ್ಮೀ ಗಂಡನನ್ನು ಕಬ್ಬಿಣದ ರಾಡ್ ನಲ್ಲಿ ಹೊಡೆಸಿ ಸಾಯಿಸಿದ್ದಳು ಎನ್ನಲಾಗಿದೆ. ಆನಂತರ, ಸಾಕ್ಷ್ಯ ಮುಚ್ಚಿ ಹಾಕುವುದಕ್ಕಾಗಿ ಅದೇ ಪರಿಸರದ ಶಿವಮೂರ್ತಿ ಹಾಗೂ ಕೃಷ್ಣಮೂರ್ತಿ ಎಂಬವರ ಜೊತೆಗೂಡಿ ಮೃತದೇಹವನ್ನು ಹೊಳೆಗೆ ಎಸೆದಿದ್ದಳು. ಇಮ್ತಿಯಾಜ್ ಸೋದರ ಎಜಾಜ್ ಈ ಬಗ್ಗೆ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದರು.
ಪ್ರಕರಣದ ಬೆನ್ನತ್ತಿದ ಸಿಪಿಐಗಳಾದ ಪ್ರಭು ಬಿ. ಸೂರಿನ್ ಮತ್ತು ಚಂದ್ರಶೇಖರ್ ಟಿಕೆ ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಶಿವಮೊಗ್ಗ 4ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಇಂದಿರಾ ಮೈಲಾಸ್ವಾಮಿ ಚೆಟ್ಟಿಯಾರ್ ಅವರು 2025ರ ಆಗಸ್ಟ್ 23ರಂದು ತೀರ್ಪು ನೀಡಿದ್ದಾರೆ. ಆರೋಪಿ ಭದ್ರಾವತಿ ಜನ್ನಾಪುರ ನಿವಾಸಿಗಳಾದ 37 ವರ್ಷದ ಲಕ್ಷ್ಮೀ ಮತ್ತು ಕೃಷ್ಣಮೂರ್ತಿ (38) ಅವರಿಗೆ ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. ಶಿವರಾಜು (40) ಗೆ 7 ವರ್ಷಗಳ ಶಿಕ್ಷೆಯನ್ನು ನೀಡಿ ತೀರ್ಪು ನೀಡಿದ್ದಾರೆ.
In a shocking murder case dating back to 2016, a Shivamogga court has awarded the death penalty to a woman and her accomplice for the brutal killing of her husband, a Muslim man. A third accused has been sentenced to seven years of imprisonment.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am