ಬ್ರೇಕಿಂಗ್ ನ್ಯೂಸ್
25-08-25 04:39 pm Mangalore Correspondent ಕ್ರೈಂ
ಬಂಟ್ವಾಳ, ಆ.25 : ಹೆಸರಾಂತ ರಸಗೊಬ್ಬರ ಉತ್ಪಾದಕ ಸಂಸ್ಥೆಯ ಡೀಲರ್ ಶಿಪ್ ನೀಡುವುದಾಗಿ ನಂಬಿಸಿ ಶುಲ್ಕ ರೂಪದಲ್ಲಿ ಹಂತ ಹಂತವಾಗಿ ಹಣ ಪಡೆದು ಬಂಟ್ವಾಳದ ವ್ಯಕ್ತಿಯೊಬ್ಬರಿಗೆ 17.60 ಲಕ್ಷ ರೂ. ವಂಚಿಸಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳದ ವಿಕ್ರಮ್ ಅವರು ಎಂಜಿನಿಯರಿಂಗ್ ಪದವಿ ಮುಗಿಸಿ ಮನೆಯಲ್ಲೇ ಇದ್ದರು. ಕಳೆದ ಜುಲೈ 4ರಂದು ಅವರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಹೆಸರಾಂತ ರಸಗೊಬ್ಬರ ಕಂಪೆನಿಯ ರಿಲೇಶನ್ಶಿಪ್ ಮ್ಯಾನೇಜರ್ ನಿಲೇಶ್ ಮಿಶ್ರಾ ಎಂದು ಪರಿಚಯಿಸಿದ್ದು, ಕಂಪನಿಯ ಡೀಲರ್ ಶಿಪ್ ನೀಡುವುದಾಗಿ ನಂಬಿಸಿದ್ದ. ವಿಕ್ರಮ್ ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಬಳಿಕ ಸಂಬಂಧಪಟ್ಟ ಅರ್ಜಿಗಳನ್ನು ಇ-ಮೇಲ್ಗೆ ಕಳುಹಿಸಿದ್ದು ಅದನ್ನು ಭರ್ತಿ ಮಾಡಿ ಬ್ಯಾಂಕ್ ವಿವರ ಸೇರಿ ವೈಯಕ್ತಿಕ ದಾಖಲೆಗಳನ್ನು ನೀಡಿದ್ದರು.
ನೋಂದಣಿ ಶುಲ್ಕವಾಗಿ 35 ಸಾವಿರ ರೂ. ಕಳುಹಿಸಿದ್ದರು. ಆನಂತರ, ಶುಲ್ಕ ರೂಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 17,60,810 ರೂ. ಕಳುಹಿಸುವಂತೆ ಮಾಡಿದ್ದರು. ಕಂಪೆನಿಯ ಉತ್ಪನ್ನಗಳ ಸಾಗಾಟ ಸಮಯದಲ್ಲಿ ಏನಾದರೂ ಸಮಸ್ಯೆಯಾದರೆ ಕರೆ ಮಾಡಿ ಎಂದು ಹೇಳಿ, ರಸಗೊಬ್ಬರ ಕಳಿಸಿಕೊಡುವುದಾಗಿ ವಾಹನ ಚಾಲಕರ ಮೊಬೈಲ್ ಸಂಖ್ಯೆಯನ್ನೂ ವಂಚಕರು ನೀಡಿದ್ದರು. ಆ.8ರಂದು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ನಾವು ಬೆಂಗಳೂರಿಗೆ ಬಂದಿದ್ದು, 10ರಂದು ಮಡಂತ್ಯಾರಿನಲ್ಲಿರುವ ವಿಕ್ರಮ್ ಅವರ ಗೋದಾಮಿಗೆ ಬರುತ್ತೇವೆ ಎಂದು ತಿಳಿಸಿದ್ದರು. ಆದರೆ ಅವರು ಹೇಳಿದಂತೆ ಯಾವುದೇ ವಾಹನ ಬಂದಿರಲಿಲ್ಲ.
ಆ.11ರಂದು ವಿಕ್ರಮ್ ಅವರು ಕರೆ ಮಾಡಿದಾಗ ಎಲ್ಲವೂ ಸ್ವಿಚ್ ಆಫ್ ಆಗಿತ್ತು. ಅವರು ಕೊಟ್ಟಿದ್ದ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿದಾಗ 'ನಿಮ್ಮ ಉತ್ಪನ್ನ ಬರುತ್ತಿದ್ದು, ಅಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಕರೆ ಸಿಗದೇ ಇರಬಹುದು ನಾವು ಅವರಿಗೆ ತಿಳಿಸುತ್ತೇವೆ' ಎಂದು ಹೇಳಿದ್ದರು. ಮುಂದೆ ಯಾವುದೇ ಕರೆ ಬರಲಿಲ್ಲ. ಇವರು ಕರೆ ಮಾಡಿದರೆ ಸ್ವಿಚ್ ಆಫ್ ಎಂಬ ಸಂದೇಶ ಬರುತ್ತಿದೆ. ಈ ಕುರಿತು ಸಂಶಯಗೊಂಡು ಬೇರೆಯವರಲ್ಲಿ ವಿಚಾರಿಸಿದಾಗ ಇದೊಂದು ಮೋಸದ ಜಾಲ ಎಂದು ತಿಳಿದುಬಂದಿದೆ ಎಂದು ಅವರು ಸೆನ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A young engineering graduate from Bantwal has reportedly been defrauded of ₹17.6 lakh by fraudsters who promised him a dealership with a reputed fertilizer manufacturing company. A case has been registered at the Bantwal Town Police Station.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm