ಬ್ರೇಕಿಂಗ್ ನ್ಯೂಸ್
25-08-25 04:39 pm Mangalore Correspondent ಕ್ರೈಂ
ಬಂಟ್ವಾಳ, ಆ.25 : ಹೆಸರಾಂತ ರಸಗೊಬ್ಬರ ಉತ್ಪಾದಕ ಸಂಸ್ಥೆಯ ಡೀಲರ್ ಶಿಪ್ ನೀಡುವುದಾಗಿ ನಂಬಿಸಿ ಶುಲ್ಕ ರೂಪದಲ್ಲಿ ಹಂತ ಹಂತವಾಗಿ ಹಣ ಪಡೆದು ಬಂಟ್ವಾಳದ ವ್ಯಕ್ತಿಯೊಬ್ಬರಿಗೆ 17.60 ಲಕ್ಷ ರೂ. ವಂಚಿಸಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳದ ವಿಕ್ರಮ್ ಅವರು ಎಂಜಿನಿಯರಿಂಗ್ ಪದವಿ ಮುಗಿಸಿ ಮನೆಯಲ್ಲೇ ಇದ್ದರು. ಕಳೆದ ಜುಲೈ 4ರಂದು ಅವರ ಮೊಬೈಲ್ಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಹೆಸರಾಂತ ರಸಗೊಬ್ಬರ ಕಂಪೆನಿಯ ರಿಲೇಶನ್ಶಿಪ್ ಮ್ಯಾನೇಜರ್ ನಿಲೇಶ್ ಮಿಶ್ರಾ ಎಂದು ಪರಿಚಯಿಸಿದ್ದು, ಕಂಪನಿಯ ಡೀಲರ್ ಶಿಪ್ ನೀಡುವುದಾಗಿ ನಂಬಿಸಿದ್ದ. ವಿಕ್ರಮ್ ಅದಕ್ಕೆ ಒಪ್ಪಿಗೆ ಸೂಚಿಸಿದ್ದರು. ಬಳಿಕ ಸಂಬಂಧಪಟ್ಟ ಅರ್ಜಿಗಳನ್ನು ಇ-ಮೇಲ್ಗೆ ಕಳುಹಿಸಿದ್ದು ಅದನ್ನು ಭರ್ತಿ ಮಾಡಿ ಬ್ಯಾಂಕ್ ವಿವರ ಸೇರಿ ವೈಯಕ್ತಿಕ ದಾಖಲೆಗಳನ್ನು ನೀಡಿದ್ದರು.
ನೋಂದಣಿ ಶುಲ್ಕವಾಗಿ 35 ಸಾವಿರ ರೂ. ಕಳುಹಿಸಿದ್ದರು. ಆನಂತರ, ಶುಲ್ಕ ರೂಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 17,60,810 ರೂ. ಕಳುಹಿಸುವಂತೆ ಮಾಡಿದ್ದರು. ಕಂಪೆನಿಯ ಉತ್ಪನ್ನಗಳ ಸಾಗಾಟ ಸಮಯದಲ್ಲಿ ಏನಾದರೂ ಸಮಸ್ಯೆಯಾದರೆ ಕರೆ ಮಾಡಿ ಎಂದು ಹೇಳಿ, ರಸಗೊಬ್ಬರ ಕಳಿಸಿಕೊಡುವುದಾಗಿ ವಾಹನ ಚಾಲಕರ ಮೊಬೈಲ್ ಸಂಖ್ಯೆಯನ್ನೂ ವಂಚಕರು ನೀಡಿದ್ದರು. ಆ.8ರಂದು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ನಾವು ಬೆಂಗಳೂರಿಗೆ ಬಂದಿದ್ದು, 10ರಂದು ಮಡಂತ್ಯಾರಿನಲ್ಲಿರುವ ವಿಕ್ರಮ್ ಅವರ ಗೋದಾಮಿಗೆ ಬರುತ್ತೇವೆ ಎಂದು ತಿಳಿಸಿದ್ದರು. ಆದರೆ ಅವರು ಹೇಳಿದಂತೆ ಯಾವುದೇ ವಾಹನ ಬಂದಿರಲಿಲ್ಲ.
ಆ.11ರಂದು ವಿಕ್ರಮ್ ಅವರು ಕರೆ ಮಾಡಿದಾಗ ಎಲ್ಲವೂ ಸ್ವಿಚ್ ಆಫ್ ಆಗಿತ್ತು. ಅವರು ಕೊಟ್ಟಿದ್ದ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿದಾಗ 'ನಿಮ್ಮ ಉತ್ಪನ್ನ ಬರುತ್ತಿದ್ದು, ಅಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಕರೆ ಸಿಗದೇ ಇರಬಹುದು ನಾವು ಅವರಿಗೆ ತಿಳಿಸುತ್ತೇವೆ' ಎಂದು ಹೇಳಿದ್ದರು. ಮುಂದೆ ಯಾವುದೇ ಕರೆ ಬರಲಿಲ್ಲ. ಇವರು ಕರೆ ಮಾಡಿದರೆ ಸ್ವಿಚ್ ಆಫ್ ಎಂಬ ಸಂದೇಶ ಬರುತ್ತಿದೆ. ಈ ಕುರಿತು ಸಂಶಯಗೊಂಡು ಬೇರೆಯವರಲ್ಲಿ ವಿಚಾರಿಸಿದಾಗ ಇದೊಂದು ಮೋಸದ ಜಾಲ ಎಂದು ತಿಳಿದುಬಂದಿದೆ ಎಂದು ಅವರು ಸೆನ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A young engineering graduate from Bantwal has reportedly been defrauded of ₹17.6 lakh by fraudsters who promised him a dealership with a reputed fertilizer manufacturing company. A case has been registered at the Bantwal Town Police Station.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am