ಬ್ರೇಕಿಂಗ್ ನ್ಯೂಸ್
25-08-25 07:42 pm HK News Desk ಕ್ರೈಂ
ಶಿವಮೊಗ್ಗ, ಆ.25 : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರು ಹೇಳಿ ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸೆಂಟ್ರಲ್ ನಲ್ಲಿ ವಾಸವಿದ್ದ ಆರೋಪಿ ರಘುನಾಥ್ ಎಂಬಾತ ಬಂಧಿತ ವ್ಯಕ್ತಿ. ಕಳೆದ ಐದಾರು ತಿಂಗಳಿಂದ ರಘುನಾಥ್ ತಾನು ಸಚಿವ ಮಧು ಬಂಗಾರಪ್ಪ ಅವರ ಅಪ್ತ ಸಹಾಯಕ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಶಿಕ್ಷಣ ಇಲಾಖೆಯ ನೌಕರರಿಗೆ ವರ್ಗಾವಣೆ ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ.
ಕಾಂಗ್ರೆಸ್ನ ಎನ್.ಎಸ್.ಯು.ಐ. ಮುಖಂಡ ಎಂದು ಹೇಳಿಕೊಂಡು ತಿರಗಾಡುತ್ತಿದ್ದ. ಆದರೆ ಪಕ್ಷದ ಮೂಲಗಳ ಪ್ರಕಾರ ಈತ ಕಾಂಗ್ರೆಸ್ ಕಾರ್ಯಕರ್ತ ಆಗಿಲ್ಲ ಎಂದು ತಿಳಿದುಬಂದಿದೆ. ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಭಾರತಿಯವರಿಗೆ ಕರೆ ಮಾಡಿದ್ದ ಆರೋಪಿ, ನಿಮಗೆ ವರ್ಗಾವಣೆಯಾಗಿದ್ದು ಪ್ಲೇಸ್ ತೋರಿಸಿಲ್ಲ ಅಲ್ವೇ.. ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಾನು ನಿಮ್ಮ ಕೆಲಸ ಮಾಡಿ ಕೊಡುವುದಾಗಿ ಹೇಳಿದ್ದ. ಆದರೆ ಈತನ ಬಗ್ಗೆ ಅನುಮಾನಗೊಂಡು ಸಚಿವರ ಅಧಿಕೃತ ಕಾರ್ಯದರ್ಶಿ ಶ್ರೀಪತಿಯವರಿಗೆ ವಿಷಯ ತಿಳಿಸಿದ್ದರು.
ಆರೋಪಿ ಮೊಬೈಲ್ ನಂಬರ್ ಟ್ರೂಕಾಲರ್ ನಲ್ಲಿ ಸಚಿವರ ಮನೆ ಆಪ್ತ ಸಹಾಯಕ ಎಂದು ತೋರಿಸಿತ್ತು. ಸಚಿವರ ಪಿ.ಎ. ಅಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡ ಗಿರೀಶ್ ಮೂಲಕ ಪೊಲೀಸರಿಗೆ ದೂರು ಕೊಡಿಸಲಾಗಿದೆ. ದೂರಿನ ಆಧಾರದ ಮೇಲೆ ರಘುನಾಥ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
A man impersonating the personal assistant (PA) of Karnataka Education Minister Madhu Bangarappa has been arrested by the Jayanagar police in Shivamogga for allegedly duping government employees and the public by promising job appointments and transfers.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 11:17 am
HK News Staffer
ಬಿಜೆಪಿ ಕಾರ್ಯಕರ್ತ ಮುಕ್ಕಚ್ಚೇರಿ ಜುಬೇರ್ ಕೊಲೆ ಪ್ರಕ...
28-04-26 02:36 pm
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm