ಬ್ರೇಕಿಂಗ್ ನ್ಯೂಸ್
25-08-25 07:42 pm HK News Desk ಕ್ರೈಂ
ಶಿವಮೊಗ್ಗ, ಆ.25 : ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೆಸರು ಹೇಳಿ ಸರ್ಕಾರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ಹೇಳಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸೆಂಟ್ರಲ್ ನಲ್ಲಿ ವಾಸವಿದ್ದ ಆರೋಪಿ ರಘುನಾಥ್ ಎಂಬಾತ ಬಂಧಿತ ವ್ಯಕ್ತಿ. ಕಳೆದ ಐದಾರು ತಿಂಗಳಿಂದ ರಘುನಾಥ್ ತಾನು ಸಚಿವ ಮಧು ಬಂಗಾರಪ್ಪ ಅವರ ಅಪ್ತ ಸಹಾಯಕ ಎಂದು ಹೇಳಿ ವಂಚನೆ ಎಸಗುತ್ತಿದ್ದ. ಶಿಕ್ಷಣ ಇಲಾಖೆಯ ನೌಕರರಿಗೆ ವರ್ಗಾವಣೆ ಹಾಗೂ ಸಾರ್ವಜನಿಕರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ.
ಕಾಂಗ್ರೆಸ್ನ ಎನ್.ಎಸ್.ಯು.ಐ. ಮುಖಂಡ ಎಂದು ಹೇಳಿಕೊಂಡು ತಿರಗಾಡುತ್ತಿದ್ದ. ಆದರೆ ಪಕ್ಷದ ಮೂಲಗಳ ಪ್ರಕಾರ ಈತ ಕಾಂಗ್ರೆಸ್ ಕಾರ್ಯಕರ್ತ ಆಗಿಲ್ಲ ಎಂದು ತಿಳಿದುಬಂದಿದೆ. ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಭಾರತಿಯವರಿಗೆ ಕರೆ ಮಾಡಿದ್ದ ಆರೋಪಿ, ನಿಮಗೆ ವರ್ಗಾವಣೆಯಾಗಿದ್ದು ಪ್ಲೇಸ್ ತೋರಿಸಿಲ್ಲ ಅಲ್ವೇ.. ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಾನು ನಿಮ್ಮ ಕೆಲಸ ಮಾಡಿ ಕೊಡುವುದಾಗಿ ಹೇಳಿದ್ದ. ಆದರೆ ಈತನ ಬಗ್ಗೆ ಅನುಮಾನಗೊಂಡು ಸಚಿವರ ಅಧಿಕೃತ ಕಾರ್ಯದರ್ಶಿ ಶ್ರೀಪತಿಯವರಿಗೆ ವಿಷಯ ತಿಳಿಸಿದ್ದರು.
ಆರೋಪಿ ಮೊಬೈಲ್ ನಂಬರ್ ಟ್ರೂಕಾಲರ್ ನಲ್ಲಿ ಸಚಿವರ ಮನೆ ಆಪ್ತ ಸಹಾಯಕ ಎಂದು ತೋರಿಸಿತ್ತು. ಸಚಿವರ ಪಿ.ಎ. ಅಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡ ಗಿರೀಶ್ ಮೂಲಕ ಪೊಲೀಸರಿಗೆ ದೂರು ಕೊಡಿಸಲಾಗಿದೆ. ದೂರಿನ ಆಧಾರದ ಮೇಲೆ ರಘುನಾಥ್ನನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
A man impersonating the personal assistant (PA) of Karnataka Education Minister Madhu Bangarappa has been arrested by the Jayanagar police in Shivamogga for allegedly duping government employees and the public by promising job appointments and transfers.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm