ಬ್ರೇಕಿಂಗ್ ನ್ಯೂಸ್
26-08-25 05:24 pm HK News Desk ಕ್ರೈಂ
ನವದೆಹಲಿ, ಆ. 26 : ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯಾಮಾರಿಸಿ ಪಂಜಾಬ್ ಮೂಲದ ಸೈಬರ್ ವಂಚಕರು ಸುಮಾರು 350 ಕೋಟಿಗೂ ಹೆಚ್ಚಿನ ಮೊತ್ತದ ಹಣವನ್ನು ಕಿತ್ತುಕೊಂಡ ಘಟನೆ ನಡೆದಿದ್ದು ಮೂವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಪಂಜಾಬಿನಲ್ಲಿ ಬಂಧಿಸಿದ್ದಾರೆ.
ಅಮೃತಸರದಲ್ಲಿ ‘ಡಿಜಿಕಾಪ್ಸ್ ದಿ ಫ್ಯೂಚರ್ ಆಫ್ ಡಿಜಿಟಲ್’ ಹೆಸರಿನಲ್ಲಿ ಆರೋಪಿಗಳು ಕಾಲ್ ಸೆಂಟರ್ ಮಾಡಿಕೊಂಡಿದ್ದರು. 2023ರಿಂದ ಅಮೆರಿಕದ ನಾಗರಿಕರನ್ನು ಗುರಿಯಾಗಿಸಿ, ಅವರ ಕಂಪ್ಯೂಟರ್, ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಹಣವನ್ನು ಪೀಕಿಸಿದ್ದಾರೆ. ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮಾಹಿತಿ ಆಧರಿಸಿ ಸಿಬಿಐ ವಂಚಕರ ಜಾಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಿಗರ್ ಅಹ್ಮದ್, ಯಶ್ ಖುರಾನಾ ಮತ್ತು ಇಂದರ್ ಜೀತ್ ಸಿಂಗ್ ಬಾಲಿ ಎಂದು ಗುರುತಿಸಲಾಗಿದೆ.
ಆರೋಪಿಗಳು ಮಾಲ್ ಸಾಫ್ಟ್ವೇರ್ ಬಳಸಿಕೊಂಡು ಅಮೆರಿಕದ ಪ್ರಜೆಗಳ ಕಂಪ್ಯೂಟರ್ ಮತ್ತು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದರು. ಬಳಿಕ, ಬ್ಯಾಂಕ್ನಲ್ಲಿರೋ ನಿಮ್ಮ ಹಣಕ್ಕೆ ತೊಂದರೆ ಇದೆ, ಕ್ರಿಪ್ಟೋ ಕರೆನ್ಸಿಗೆ ವರ್ಗಾಯಿಸಿ ಎಂದು ಹೇಳುತ್ತಿದ್ದರು. ಇವರದ್ದೇ ನಿಯಂತ್ರಣದಲ್ಲಿರುವ ಕ್ರಿಪ್ಟೋ ಕರೆನ್ಸಿಗೆ ಬ್ಯಾಂಕ್ ಖಾತೆಯಿಂದ ಹಣವನ್ನು ವರ್ಗಾಯಿಸುತ್ತಿದ್ದಂತೆ ವಂಚಕರು ಅವನ್ನು ಎಗರಿಸುತ್ತಿದ್ದರು. ಅಮೆರಿಕದಿಂದ 40 ಮಿಲಿಯನ್ ಯುಎಸ್ ಡಾಲರ್ (350 ಕೋಟಿ ರು.) ಮೊತ್ತವನ್ನು ಕಿತ್ತುಕೊಂಡಿರುವ ಆರೋಪ ಇದೆ.
ಬಂಧಿತರಿಂದ 54 ಲಕ್ಷ ರೂ., ಎಂಟು ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳು ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಲಾಗಿದೆ. ಆ.18 ರಂದು ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ ಸಿಬಿಐ ಅಧಿಕಾರಿಗಳು ಅಮೃತಸರ ಮತ್ತು ದೆಹಲಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಅಮೃತಸರದ ಕಾಲ್ ಸೆಂಟರ್ ನಲ್ಲಿ 30 ಜನರು ಇದೇ ರೀತಿಯ ವಂಚನೆ ಕೆಲಸದಲ್ಲಿ ತೊಡಗಿದ್ದರು ಎಂಬ ಮಾಹಿತಿಯಿದ್ದು ಸಿಬಿಐ ಕಾರ್ಯಾಚರಣೆ ಮುಂದುವರಿಸಿದೆ.
In a major international cybercrime bust, the Central Bureau of Investigation (CBI) has arrested three individuals from Punjab for allegedly scamming American citizens out of over ₹350 crore (approximately USD 40 million) over a span of two years
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm