ಬ್ರೇಕಿಂಗ್ ನ್ಯೂಸ್
26-08-25 05:24 pm HK News Desk ಕ್ರೈಂ
ನವದೆಹಲಿ, ಆ. 26 : ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯಾಮಾರಿಸಿ ಪಂಜಾಬ್ ಮೂಲದ ಸೈಬರ್ ವಂಚಕರು ಸುಮಾರು 350 ಕೋಟಿಗೂ ಹೆಚ್ಚಿನ ಮೊತ್ತದ ಹಣವನ್ನು ಕಿತ್ತುಕೊಂಡ ಘಟನೆ ನಡೆದಿದ್ದು ಮೂವರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಪಂಜಾಬಿನಲ್ಲಿ ಬಂಧಿಸಿದ್ದಾರೆ.
ಅಮೃತಸರದಲ್ಲಿ ‘ಡಿಜಿಕಾಪ್ಸ್ ದಿ ಫ್ಯೂಚರ್ ಆಫ್ ಡಿಜಿಟಲ್’ ಹೆಸರಿನಲ್ಲಿ ಆರೋಪಿಗಳು ಕಾಲ್ ಸೆಂಟರ್ ಮಾಡಿಕೊಂಡಿದ್ದರು. 2023ರಿಂದ ಅಮೆರಿಕದ ನಾಗರಿಕರನ್ನು ಗುರಿಯಾಗಿಸಿ, ಅವರ ಕಂಪ್ಯೂಟರ್, ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ಹಣವನ್ನು ಪೀಕಿಸಿದ್ದಾರೆ. ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಮಾಹಿತಿ ಆಧರಿಸಿ ಸಿಬಿಐ ವಂಚಕರ ಜಾಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಜಿಗರ್ ಅಹ್ಮದ್, ಯಶ್ ಖುರಾನಾ ಮತ್ತು ಇಂದರ್ ಜೀತ್ ಸಿಂಗ್ ಬಾಲಿ ಎಂದು ಗುರುತಿಸಲಾಗಿದೆ.
ಆರೋಪಿಗಳು ಮಾಲ್ ಸಾಫ್ಟ್ವೇರ್ ಬಳಸಿಕೊಂಡು ಅಮೆರಿಕದ ಪ್ರಜೆಗಳ ಕಂಪ್ಯೂಟರ್ ಮತ್ತು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದರು. ಬಳಿಕ, ಬ್ಯಾಂಕ್ನಲ್ಲಿರೋ ನಿಮ್ಮ ಹಣಕ್ಕೆ ತೊಂದರೆ ಇದೆ, ಕ್ರಿಪ್ಟೋ ಕರೆನ್ಸಿಗೆ ವರ್ಗಾಯಿಸಿ ಎಂದು ಹೇಳುತ್ತಿದ್ದರು. ಇವರದ್ದೇ ನಿಯಂತ್ರಣದಲ್ಲಿರುವ ಕ್ರಿಪ್ಟೋ ಕರೆನ್ಸಿಗೆ ಬ್ಯಾಂಕ್ ಖಾತೆಯಿಂದ ಹಣವನ್ನು ವರ್ಗಾಯಿಸುತ್ತಿದ್ದಂತೆ ವಂಚಕರು ಅವನ್ನು ಎಗರಿಸುತ್ತಿದ್ದರು. ಅಮೆರಿಕದಿಂದ 40 ಮಿಲಿಯನ್ ಯುಎಸ್ ಡಾಲರ್ (350 ಕೋಟಿ ರು.) ಮೊತ್ತವನ್ನು ಕಿತ್ತುಕೊಂಡಿರುವ ಆರೋಪ ಇದೆ.
ಬಂಧಿತರಿಂದ 54 ಲಕ್ಷ ರೂ., ಎಂಟು ಮೊಬೈಲ್ಗಳು ಮತ್ತು ಲ್ಯಾಪ್ಟಾಪ್ಗಳು ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ವಶಪಡಿಸಲಾಗಿದೆ. ಆ.18 ರಂದು ಈ ಸಂಬಂಧ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ ಸಿಬಿಐ ಅಧಿಕಾರಿಗಳು ಅಮೃತಸರ ಮತ್ತು ದೆಹಲಿಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಅಮೃತಸರದ ಕಾಲ್ ಸೆಂಟರ್ ನಲ್ಲಿ 30 ಜನರು ಇದೇ ರೀತಿಯ ವಂಚನೆ ಕೆಲಸದಲ್ಲಿ ತೊಡಗಿದ್ದರು ಎಂಬ ಮಾಹಿತಿಯಿದ್ದು ಸಿಬಿಐ ಕಾರ್ಯಾಚರಣೆ ಮುಂದುವರಿಸಿದೆ.
In a major international cybercrime bust, the Central Bureau of Investigation (CBI) has arrested three individuals from Punjab for allegedly scamming American citizens out of over ₹350 crore (approximately USD 40 million) over a span of two years
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm