ಬ್ರೇಕಿಂಗ್ ನ್ಯೂಸ್
30-08-25 03:22 pm Mangalore Correspondent ಕ್ರೈಂ
ಮಂಗಳೂರು, ಆ.30 : ಮೂರುವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತಂದೆಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐದು ವರ್ಷ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಬಜ್ಜೆಯಲ್ಲಿ ವಾಸಿಸುತ್ತಿದ್ದ 34 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ಅಪರಾಧಿ. 2024ರ ಡಿ.18ರಂದು ಬೆಳಗ್ಗೆ 6 ಗಂಟೆಗೆ ಮಗುವಿನ ತಾಯಿ ಮಗುವನ್ನು ತನ್ನ ತಂಗಿಯ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ 3.30ರ ವೇಳೆಗೆ ಆಕೆ ಮಗುವನ್ನು ಪಕ್ಕದ ಮತ್ತೊಂದು ಮನೆಯಲ್ಲಿ ಬಿಟ್ಟು ಶಾಲೆಗೆ ಹೋಗಿದ್ದರು. ಈ ವೇಳೆ ಅಲ್ಲಿಗೆ ಬಂದ ತಂದೆ ಮಗುವನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ದೌರ್ಜನ್ಯವೆಸಗಿದ್ದ.
ರಾತ್ರಿ ಮನೆಗೆ ಬಂದ ತಾಯಿ ಮಗುವಿನ ಗುಪ್ತಾಂಗದ ಮೇಲಾದ ಗಾಯ ನೋಡಿ ಮಗುವಿನ ಬಳಿ ಕೇಳಿದಾಗ ಮಗು ನಡೆದ ವಿಷಯ ತಿಳಿಸಿತ್ತು. ಮರುದಿನ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಇನ್ಸ್ಪೆಕ್ಟರ್ ಸಂದೀಪ್ ಆರೋಪಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಮನು ಅಪರಾಧಿಗೆ ಪೋಕ್ಸೋ ಕಲಂ 10ರಡಿ ಐದು ವರ್ಷ ಕಠಿಣ ಶಿಕ್ಷೆ ವಿಧಿಸಿದ್ದಾರೆ. ನೊಂದ ಬಾಲಕಿಗೆ ಪರಿಹಾರವಾಗಿ ದಂಡದ 20 ಸಾವಿರ ರೂ. ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 30 ಸಾವಿರ ರೂ. ಪರಿಹಾರ ಮೊತ್ತ ಸೇರಿ ಒಟ್ಟು 50 ಸಾವಿರ ರೂ. ಪಾವತಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.
In a shocking case of child sexual abuse, a 34-year-old man from Bajpe has been sentenced to five years of rigorous imprisonment and a fine of ₹20,000 by the Additional District and Sessions Court for sexually assaulting his three-and-a-half-year-old daughter.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm