ಬ್ರೇಕಿಂಗ್ ನ್ಯೂಸ್
01-09-25 09:21 pm Udupi Correspondent ಕ್ರೈಂ
ಉಡುಪಿ, ಸೆ.1 : ಒಂದೂವರೆ ವರ್ಷದ ಮಗುವಿಗೆ ನೇಣು ಬಿಗಿದು ಬಳಿಕ ತಾಯಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಲು ಹೆರಂಜೆ ಕ್ರಾಸ್ ಬಳಿ ಸೋಮವಾರ ನಡೆದಿದೆ.
ಮೃತರನ್ನು ಸುಭಾಷ್ ಎಂಬವರ ಪತ್ನಿ ಸುಷ್ಮೀತಾ (23) ಹಾಗೂ ಒಂದೂವರೆ ವರ್ಷದ ಮಗು ಶ್ರೇಷ್ಠ ಎಂದು ಗುರುತಿಸಲಾಗಿದೆ. ಪತಿ ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ದುರಂತ ಸಾವು ತಂದುಕೊಂಡಿದ್ದಾರೆ. ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
2009ರಲ್ಲಿ ನೆರೆಮನೆಯ ವಿನ್ಸೆಂಟ್ ಪಾಯಸ್ ಎಂಬವರ ಮೇಲೆ ಸುಭಾಷ್ ಮತ್ತು ಮನೆಯವರು ಹಲ್ಲೆ ನಡೆಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆಬಳಿಕ ವಿಚಾರಣೆ ನಡೆದು 2012 ರಲ್ಲಿ ಜಿಲ್ಲಾ ನ್ಯಾಯಾಲಯ ಸುಭಾಷ್, ಆತನ ತಾಯಿ ಮತ್ತು ಸೋದರನಿಗೆ 12 ವರ್ಷಗಳ ಗರಿಷ್ಠ ಶಿಕ್ಷೆ ವಿಧಿಸಿತ್ತು. ಸುಭಾಷ್ ಕುಟುಂಬ ಜಿಲ್ಲಾ ಕೋರ್ಟ್ ನೀಡಿದ್ದ ಶಿಕ್ಷೆಯ ತೀರ್ಪನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಸುದೀರ್ಘ 12 ವರ್ಷಗಳ ವಾದ- ಪ್ರತಿವಾದ ನಡೆದ ಬಳಿಕ ಕಳೆದ ಜುಲೈ ತಿಂಗಳಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರಿಂದಾಗಿ ತಾಯಿ, ಮಕ್ಕಳು 12 ವರ್ಷಗಳ ಶಿಕ್ಷೆ ಅನುಭವಿಸಲು ಜೈಲಿಗೆ ಹೋಗುವುದು ಪಕ್ಕಾ ಆಗಿತ್ತು.

ಇದೇ ವಿಚಾರದಲ್ಲಿ ವಕೀಲರ ಜೊತೆಗೆ ಚರ್ಚಿಸಲು ಸುಭಾಷ್ ಬೆಂಗಳೂರು ತೆರಳಿದ್ದರು. ಅಲ್ಲದೆ, ಶಿಕ್ಷೆಯ ವಿಚಾರದಲ್ಲಿ ಕುಟುಂಬಸ್ಥರು ತೀವ್ರ ಚಿಂತೆಗೆ ಒಳಗಾಗಿದ್ದರು. 16 ವರ್ಷಗಳ ಹಿಂದಿನ ಕೇಸಿನ ಬಗ್ಗೆ ತಿಳಿಯದೆ ಸುಭಾಷ್ ಜೊತೆಗೆ ಸುಷ್ಮಿತಾ ಮದುವೆಯಾಗಿತ್ತಲ್ಲದೆ, ಮಗುವೂ ಆಗಿತ್ತು. ಈಗ ಪತಿಗೆ ಶಿಕ್ಷೆ ಘೋಷಣೆ ಆಗಿದ್ದನ್ನು ತಿಳಿದು ಸುಷ್ಮಿತಾ ತೀವ್ರ ನೊಂದುಕೊಂಡು ಸಾವಿಗೆ ಶರಣಾಗಿದ್ದಾರೆ ಎನ್ನುವ ಶಂಕೆ ಇದೆ. ಆದರೆ ಡೆತ್ ನೋಟ್ ನಲ್ಲಿ ಈ ಬಗ್ಗೆ ಉಲ್ಲೇಖ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎಸ್ಪಿ ಹರಿರಾಮ್ ಶಂಕರ್ ಕೂಡ ತೆರಳಿ ಪರಿಶೀಲನೆ ಮಾಡಿದ್ದಾರೆ. ಕೊಲೆಯತ್ನ ಪ್ರಕರಣದಲ್ಲಿ 7ರಿಂದ 12 ವರ್ಷ ಅಥವಾ ಜೀವಾವಧಿ ಶಿಕ್ಷೆ ನೀಡುವುದಕ್ಕೂ ಅವಕಾಶ ಇದೆ. ಸುಭಾಷ್ ಪ್ರಕರಣದಲ್ಲಿ ನ್ಯಾಯಾಲಯ ಇಡೀ ಕುಟುಂಬಕ್ಕೆ ಗರಿಷ್ಠ ಶಿಕ್ಷೆಯನ್ನೇ ನೀಡಿತ್ತು.
In a deeply disturbing incident, a 23-year-old woman and her one-and-a-half-year-old child were found dead in an apparent case of suicide near Heranje Cross in Kunjalu, under the jurisdiction of the Brahmavar Police Station on Monday. The deceased have been identified as Sushmita (23), wife of Subhash, and their son Shreshta (1.5 years).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm