ಬ್ರೇಕಿಂಗ್ ನ್ಯೂಸ್
02-09-25 11:22 am Mangalore Correspondent ಕ್ರೈಂ
ಮಂಗಳೂರು, ಸೆ.2 : ಫಳ್ನೀರ್ ನಲ್ಲಿ ಆಟೋ ಚಾಲಕನೊಬ್ಬ ತನ್ನ ಮೇಲೆ ತಾನೇ ಹಲ್ಲೆ ಮಾಡಿಕೊಂಡು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾಗಿ ಸುಳ್ಳು ಸುದ್ದಿ ಹಬ್ಬಿಸಿರುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.
ಆಗಸ್ಟ್ 31ರ ಭಾನುವಾರ ರಾತ್ರಿ ಬಶೀರ್ ಎನ್ನುವ ಹೆಸರಿನ ಆಟೋ ಚಾಲಕ ಮೂತ್ರ ಮಾಡಲೆಂದು ಫಳ್ನೀರ್ ನಲ್ಲಿ ಆಟೋ ನಿಲ್ಲಿಸಿದ್ದಾಗ ತನ್ನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ ಎಂದು ಸುದ್ದಿ ಹಬ್ಬಿಸಿದ್ದರು. ಅಲ್ಲದೆ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದರ ಬೆನ್ನಲ್ಲೇ ಪೊಲೀಸರು ಸ್ಥಳಕ್ಕೆ ತೆರಳಿ ಆಟೋ ಚಾಲಕನ ಹೇಳಿಕೆ ಪಡೆದು ಕೇಸು ದಾಖಲಿಸಿದ್ದರು. ಬ್ಯಾರಿ ಭಾಷೆ ಮಾತನಾಡುತ್ತಿದ್ದವರು ನೀನು ಪೊಲೀಸರಿಗೆ ಮಾಹಿತಿ ನೀಡ್ತಿಯಲ್ವಾ ಎಂದು ಹೇಳಿ ಹಲ್ಲೆ ನಡೆಸಿದ್ದಾಗಿ ಬಶೀರ್ ತಿಳಿಸಿದ್ದರು. ಇದರಂತೆ, ಹಲ್ಲೆ ನಡೆಸಿದವರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖೆಯ ಸಂದರ್ಭದಲ್ಲಿ ಬಶೀರ್ ಹಲ್ಲೆಯಾದ ಜಾಗವನ್ನು ತೋರಿಸುವಲ್ಲಿ ಎಡವಿದ್ದಾರೆ. ಸಿಸಿಟಿವಿಯಲ್ಲಿ ಪೊಲೀಸರು ಚೆಕ್ ಮಾಡಿದ್ದು ಸ್ಥಳದಲ್ಲಿ ಹಲ್ಲೆ ನಡೆದಿದ್ದು ಕಂಡುಬರಲಿಲ್ಲ. ಹೀಗಾಗಿ ದೂರುದಾರನನ್ನು ಮತ್ತಷ್ಟು ತನಿಖೆ ನಡೆಸಿದಾಗ ಸುಳ್ಳು ದೂರು ನೀಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಹಿಂದೆ ಪೊಲೀಸರಿಗೆ ಮಾಹಿತಿ ಕೊಟ್ಟ ವಿಚಾರದಲ್ಲಿ ಕೆಲವರು ಬೆದರಿಕೆ ಹಾಕಿದ್ದರು. ಇದರಿಂದಾಗಿ ಅವರು ದಾಳಿ ಮಾಡುತ್ತಾರೆಂಬ ಭಯ ಇದ್ದುದರಿಂದ ಅದಕ್ಕು ಮೊದಲೇ ದಾಳಿಯ ನಾಟಕ ಮಾಡಿದ್ದೇನೆ ಎಂದು ಹೇಳಿದ್ದಾನೆ.
ತಾನೇ ಹೊಟ್ಟೆಯ ಭಾಗಕ್ಕೆ ಸ್ವಲ್ಪ ತಿವಿದು ಗಾಯ ಮಾಡಿಕೊಂಡಿದ್ದು ಯಾರೋ ಹಲ್ಲೆ ನಡೆಸಿದ್ದಾರೆಂದು ಹೇಳಿದ್ದ. ಪೊಲೀಸ್ ತನಿಖೆಯಲ್ಲಿ ನೈಜ ವಿಷಯ ತಿಳಿಯುತ್ತಲೇ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ಹಾಕಿದ್ದಾರೆ. ಸುಳ್ಳು ಭಾರೀ ವೇಗದಲ್ಲಿ ಓಡುತ್ತದೆ, ಸತ್ಯ ಕುಂಟುತ್ತಾ ಬಂದು ಎದುರು ನಿಲ್ಲುತ್ತದೆ. ಈ ವಿಚಾರದಲ್ಲು ಅದೇ ರೀತಿ ಆಗಿದೆ. ಆಟೋ ಚಾಲಕನಿಗೆ ಹಲ್ಲೆಯೆಂದು ಭಾರೀ ವೇಗದಲ್ಲಿ ಸುದ್ದಿ ಓಡಿತ್ತು. ಒಂದ್ವೇಳೆ, ಹಿಂದುಗಳು ಹಲ್ಲೆ ಮಾಡಿದ್ದಾರೆಂದು ಆತ ಹೇಳಿರುತ್ತಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತಿತ್ತು. ಜಾಲತಾಣದಲ್ಲಿ ವಿಭಿನ್ನ ರೀತಿಯಲ್ಲಿ ಸುದ್ದಿ ಓಡುತ್ತಿತ್ತು. ಪೊಲೀಸರ ವಿಚಾರಣೆಯಲ್ಲಿ ಹಲ್ಲೆಯೇ ಆಗಿಲ್ಲ ಎನ್ನುವ ನೈಜ ವಿಷಯ ಗೊತ್ತಾಗಿದೆ. ಸುದ್ದಿ ಹಂಚಿಕೊಳ್ಳುವಾಗ ಸಾರ್ವಜನಿಕರು ಜಾಗ್ರತೆ ವಹಿಸಬೇಕು ಎಂದು ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
In a dramatic twist, police investigations have revealed that an auto driver in Falnir faked an assault on himself and spread false claims of being attacked by a group. On the night of August 31, the driver, identified as Basheer, had stopped his auto in Falnir, allegedly to relieve himself. He later told police that a group accosted and assaulted him, claiming he was passing information to the police.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm