ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am