ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm