ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm