ಬ್ರೇಕಿಂಗ್ ನ್ಯೂಸ್
26-12-20 09:29 am Mangaluru Correspondent ಕ್ರೈಂ
ಉಳ್ಳಾಲ, ಡಿ.26: ಸ್ಕೂಟರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರಿಗೆ ಪಲ್ಸರ್ ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಇರಿದು ಪರಾರಿಯಾದ ಘಟನೆ ನಿನ್ನೆ ರಾತ್ರಿ ಕುತ್ತಾರು ಪದವಿನ ಬಳಿಯ ಅಡು ಎಂಬಲ್ಲಿ ನಡೆದಿದೆ.
ಸೇವಂತಿ ಗುಡ್ಡೆಯ ಆದಿತ್ಯ (23) ಮತ್ತು ಪಂಡಿತ್ ಹೌಸ್ ಶಿವಾಜಿನಗರದ ನಿವಾಸಿ ಪವನ್(22) ಇರಿತಕ್ಕೊಳಗಾದ ಯುವಕರು. ಅದೃಷ್ಟವಶಾತ್ ಇಬ್ಬರು ಕೂಡ ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದಿತ್ಯ ಅವರ ತಮ್ಮ ಅನೀಷ್ ಎಂಬಾತ ರಾಣಿಪುರಕ್ಕೆ ಕೇಟರಿಂಗ್ ಕೆಲಸಕ್ಕೆ ತೆರಳಿದ್ದು ಅವನನ್ನು ವಾಪಸ್ ಕರೆತರಲು ಆದಿತ್ಯ ಸ್ನೇಹಿತ ಪವನ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಣಿಪುರಕ್ಕೆ ತೆರಳಿದ್ದಾರೆ. ಪವನ್ ವಾಹನ ಚಲಾಯಿಸುತ್ತಿದ್ದು ಆದಿತ್ಯ ಹಿಂಬಂದಿ ಕೂತಿದ್ದರೆನ್ನಲಾಗಿದೆ. ಸುಮಾರು 9.30 ಗಂಟೆ ಹೊತ್ತಿಗೆ ಋಷಿವನದ ಬಳಿಯ ಅಡು ಎಂಬಲ್ಲಿಗೆ ತಲುಪಿದಾಗ ಹಿಂದಿನಿಂದ ಬಂದ ಪಲ್ಸರ್ ಬೈಕಲ್ಲಿದ್ದ ಇಬ್ಬರು ದುಷ್ಕರ್ಮಿಗಳು ಆದಿತ್ಯರ ಬೆನ್ನು , ಪವನ್ ಅವರ ತೋಳಿಗೆ ಇರಿದು ರಾಣಿಪುರದ ಕಡೆಗೆ ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆಲವು ವರ್ಷಗಳ ಹಿಂದೆ ಉಳ್ಳಾಲ ಪ್ರದೇಶದಲ್ಲಿ ಅಪರಿಚಿತ ಕಪ್ಪು ಪಲ್ಸರ್ ನಲ್ಲಿ ಬರುತ್ತಿದ್ದ ದುಷ್ಕರ್ಮಿಗಳಿಂದ ಸರಣಿ ಇರಿತಗಳಾಗಿದ್ದವು. ಇದೀಗ ಮತ್ತೆ ಅದೇ ರೀತಿಯ ಪಲ್ಸರ್ ಬೈಕ್ ಗುಮ್ಮ ಈ ಪ್ರದೇಶದಲ್ಲಿ ಜಾಗೃತಗೊಂಡಿದ್ದು ಅಶಾಂತಿ ಸೃಷ್ಟಿಸಲು ಸಂಚು ನಡೆಸುತ್ತಿದೆ. ಉಳ್ಳಾಲ ಪೊಲೀಸರು ಕೇಸು ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.
Two young men who were travelling by a motorbike in Ullal, Mangalore were stabbed by a gang which approached them in another motorbike from behind and caused an accident before stabbing them.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm