ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm