ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm