ಬ್ರೇಕಿಂಗ್ ನ್ಯೂಸ್
05-09-25 10:53 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಪೆರ್ನೆಯಲ್ಲಿ ಹಟ್ಟಿಯಿಂದ ಹಸುವನ್ನು ಕದ್ದು ಅಲ್ಲಿಯೇ ತೋಟದಲ್ಲಿ ಕಡಿದು ಮಾಂಸಗೈದ ಪ್ರಕರಣದಲ್ಲಿ ಮಂಗಳೂರಿನ ಕುದ್ರೋಳಿಯ ಬೀಫ್ ಸ್ಟಾಲ್ ಮಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಕುದ್ರೋಳಿ ನಿವಾಸಿ, ಬೀಫ್ ಸ್ಟಾಲ್ ಮಾಲಕ ಮಹಮ್ಮದ್ ಮನ್ಸೂರ್ (48), ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತರು.
ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ಗುರುವಾರ ನಸುಕಿನಲ್ಲಿ ದೇಜಪ್ಪ ಮೂಲ್ಯ ಎಂಬವರ ಮನೆ ಹಟ್ಟಿಯಲ್ಲಿದ್ದ ಗಬ್ಬದ ಹಸುವನ್ನು ಕದ್ದೊಯ್ದು ಅವರದೇ ತೋಟದಲ್ಲಿ ಕಡಿದು ಮಾಂಸ ಮಾಡಿ ಒಯ್ಯಲಾಗಿತ್ತು. ದುಷ್ಕರ್ಮಿಗಳ ಕೃತ್ಯದ ಭಾರೀ ಆಕ್ರೋಶ ಕೇಳಿಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹ ಮಾಡಿದ್ದರು. ಪುತ್ತೂರು ಶಾಸಕ ಅಶೋಕ್ ರೈ ಕೂಡ ಆಕ್ರೋಶ ವ್ಯಕ್ತಪಡಿಸಿ, ಹಸುವನ್ನು ಕದ್ದು ಹತ್ಯೆಗೈದ ಆರೋಪಿಗಳ ಕೈ ಕಡಿಯಬೇಕೆಂದು ಹೇಳಿದ್ದರು.
ಪೊಲೀಸರು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ಆರೋಪಿಗಳು ಆ.14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳವುಗೈದು, ಅಲ್ಲಿಯೇ ಪರಿಸರದಲ್ಲಿ ಹತ್ಯೆಗೈದು ಮಾಂಸ ಮಾಡಿದ್ದು ಪತ್ತೆಯಾಗಿತ್ತು. ಮರುದಿನ ಅದರ ಅವಶೇಷಗಳು ಅಲ್ಲಿಯೇ ಸಮೀಪದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ತುಂಬೆಯ ಘಟನೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸದೆ ನಿರ್ಲಕ್ಷ್ಯ ತೋರಿದ್ದೇ ಉಪ್ಪಿನಂಗಡಿ ಬಳಿ ದನವನ್ನು ಹಟ್ಟಿಯಿಂದ ಎಳೆದೊಯ್ದು ಹತ್ಯೆಗೈಯಲು ಕಾರಣವಾಗಿತ್ತು. ಇದೀಗ ಎರಡೂ ಪ್ರಕರಣ ಒಂದೇ ರೀತಿ ಇರೋದನ್ನು ಅರಿತು ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
In a shocking incident, a cow was stolen from a cowshed and slaughtered in a nearby plantation in Perenne village under Uppinangady Police limits. The incident has sparked outrage, leading to the arrest of three individuals, including the owner of a beef stall in Kudroli, Mangaluru. The arrested have been identified as: Mohammed Mansoor (48), a resident of Kudroli and owner of a beef stall. Irshad (34), resident of Chembugudde, Ullal. Abdul Azeem (18),
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm