ಬ್ರೇಕಿಂಗ್ ನ್ಯೂಸ್
05-09-25 10:53 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಪೆರ್ನೆಯಲ್ಲಿ ಹಟ್ಟಿಯಿಂದ ಹಸುವನ್ನು ಕದ್ದು ಅಲ್ಲಿಯೇ ತೋಟದಲ್ಲಿ ಕಡಿದು ಮಾಂಸಗೈದ ಪ್ರಕರಣದಲ್ಲಿ ಮಂಗಳೂರಿನ ಕುದ್ರೋಳಿಯ ಬೀಫ್ ಸ್ಟಾಲ್ ಮಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಕುದ್ರೋಳಿ ನಿವಾಸಿ, ಬೀಫ್ ಸ್ಟಾಲ್ ಮಾಲಕ ಮಹಮ್ಮದ್ ಮನ್ಸೂರ್ (48), ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತರು.
ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ಗುರುವಾರ ನಸುಕಿನಲ್ಲಿ ದೇಜಪ್ಪ ಮೂಲ್ಯ ಎಂಬವರ ಮನೆ ಹಟ್ಟಿಯಲ್ಲಿದ್ದ ಗಬ್ಬದ ಹಸುವನ್ನು ಕದ್ದೊಯ್ದು ಅವರದೇ ತೋಟದಲ್ಲಿ ಕಡಿದು ಮಾಂಸ ಮಾಡಿ ಒಯ್ಯಲಾಗಿತ್ತು. ದುಷ್ಕರ್ಮಿಗಳ ಕೃತ್ಯದ ಭಾರೀ ಆಕ್ರೋಶ ಕೇಳಿಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹ ಮಾಡಿದ್ದರು. ಪುತ್ತೂರು ಶಾಸಕ ಅಶೋಕ್ ರೈ ಕೂಡ ಆಕ್ರೋಶ ವ್ಯಕ್ತಪಡಿಸಿ, ಹಸುವನ್ನು ಕದ್ದು ಹತ್ಯೆಗೈದ ಆರೋಪಿಗಳ ಕೈ ಕಡಿಯಬೇಕೆಂದು ಹೇಳಿದ್ದರು.
ಪೊಲೀಸರು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ಆರೋಪಿಗಳು ಆ.14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳವುಗೈದು, ಅಲ್ಲಿಯೇ ಪರಿಸರದಲ್ಲಿ ಹತ್ಯೆಗೈದು ಮಾಂಸ ಮಾಡಿದ್ದು ಪತ್ತೆಯಾಗಿತ್ತು. ಮರುದಿನ ಅದರ ಅವಶೇಷಗಳು ಅಲ್ಲಿಯೇ ಸಮೀಪದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ತುಂಬೆಯ ಘಟನೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸದೆ ನಿರ್ಲಕ್ಷ್ಯ ತೋರಿದ್ದೇ ಉಪ್ಪಿನಂಗಡಿ ಬಳಿ ದನವನ್ನು ಹಟ್ಟಿಯಿಂದ ಎಳೆದೊಯ್ದು ಹತ್ಯೆಗೈಯಲು ಕಾರಣವಾಗಿತ್ತು. ಇದೀಗ ಎರಡೂ ಪ್ರಕರಣ ಒಂದೇ ರೀತಿ ಇರೋದನ್ನು ಅರಿತು ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
In a shocking incident, a cow was stolen from a cowshed and slaughtered in a nearby plantation in Perenne village under Uppinangady Police limits. The incident has sparked outrage, leading to the arrest of three individuals, including the owner of a beef stall in Kudroli, Mangaluru. The arrested have been identified as: Mohammed Mansoor (48), a resident of Kudroli and owner of a beef stall. Irshad (34), resident of Chembugudde, Ullal. Abdul Azeem (18),
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm