ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm