ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm