ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm