ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm