ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ : ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು

10-08-20 03:26 pm       Headline Karnataka News Network   ಕ್ರೈಂ

ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಹಾವೇರಿ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ದ್ಯಾಮವ್ವನ ಗುಡಿ ಓಣಿಯಲ್ಲಿ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹಾವೇರಿ, ಆಗಸ್ಟ್‌ 10: ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ದ್ಯಾಮವ್ವನ ಗುಡಿ ಓಣಿಯಲ್ಲಿ ವಿದ್ಯಾರ್ಥಿನಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಿದ್ಯಾರ್ಥಿನಿ ಗಣಿತ ವಿಷಯಲ್ಲಿ ಫೇಲಾಗಿದ್ದಳು ಎನ್ನಲಾಗಿದ್ದು. ಇದರಿಂದ ಮನನೊಂದ ವಿದ್ಯಾರ್ಥಿನಿ ದ್ಯಾಮವ್ವನ ಗುಡಿ ಓಣಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಾಲಕಿ ಒದ್ದಾಟವನ್ನು ಗಮನಿಸಿದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.

ಮತ್ತೊಬ್ಬ ವಿದ್ಯಾರ್ಥಿನಿ ಬ್ಯಾಡಗಿ ತಾಲೂಕು ಕಾಶಂಬಿ ಗ್ರಾಮದವಳಾಗಿದ್ದು ಕಡಿಮೆ ಅಂಕ ಬಂದಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.