ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm