ಬ್ರೇಕಿಂಗ್ ನ್ಯೂಸ್
12-09-25 11:07 pm Mangalore Correspondent ಕ್ರೈಂ
ಮಂಗಳೂರು, ಸೆ.12 : ಅಪ್ರಾಪ್ತ ಬಾಲಕಿ ಮನೆಯಲ್ಲಿ ಒಬ್ಬಂಟಿ ಇದ್ದಾಗ ಮನೆಗೆ ನುಗ್ಗಿ ಆಕೆಗೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದ ಪ್ರಕರಣ ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಫ್ಸಿ-೨ (ಪೋಕ್ಸೊ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (೫೮) ಶಿಕ್ಷೆಗೊಳಗಾದ ಅಪರಾಧಿ.
ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳಾಗಿದ್ದು, ಕೋಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಬಾಲಕಿಯ ತಾಯಿ ಮಗಳನ್ನು ತನ್ನ ಸೋದರ ಸಂಬಂಧಿ ಮನೆಯಲ್ಲಿ ಬಿಟ್ಟು ಕೊಣಾಜೆ ವಸತಿ ಶಾಲೆಗೆ ಬಿಟ್ಟು ಬರುವಂತೆ ಹೇಳಿ ಊರಿಗೆ ತೆರಳಿದ್ದರು. 2024ರ ಆ.6ರಂದು ಬೆಳಗ್ಗೆ ಪಿರ್ಯಾದಿದಾರರು (ಬಾಲಕಿಯ ಮಾವ) ಗಾರೆ ಕೆಲಸಕ್ಕೆ ಹೊರಟು ಹೋಗಿದ್ದರೆ ಅವರ ಹೆಂಡತಿ ಊರಿಗೆ ಹೋಗಿದ್ದರು. ಬಾಲಕಿ ಒಬ್ಬಳೇ ಮನೆಯಲ್ಲಿದ್ದು, ಈ ಸಂದರ್ಭ ಪಕ್ಕದ ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿ ಫಕೀರಪ್ಪ ಬಾಲಕಿ ಇದ್ದ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಬಾಲಕಿ ವಿರೋಧಿಸಿದಾಗ ಹಲ್ಲೆಗೈದು ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗುತ್ತಾನೆ.
ಅಪ್ರಾಪ್ತ ಬಾಲಕಿಯ ಕೊಲೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪಿ ಮೇಲಿನ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗೆ ಬಿಎನ್ಎಸ್ ೧೦೩(೧) ಕೊಲೆ ಪ್ರಕರಣಕ್ಕೆ ಮರಣದಂಡನೆ ಶಿಕ್ಷೆ, ಪೊಕ್ಸೋ ೪(೨)ರಡಿ ಪೋಕ್ಸೋ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ಮತ್ತು ೫೦ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ, ಬಿಎನ್ಎಸ್ ೩೩೨(ಎ) ಅಕ್ರಮ ಪ್ರವೇಶ ಅಪರಾಧದಡಿ ಜೀವಾವಧಿ ಶಿಕ್ಷೆ ಮತ್ತು ೫ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
5 ಲಕ್ಷ ರೂ. ಪರಿಹಾರ ನೀಡಲು ಅದೇಶ
ಬಾಲಕಿಯ ತಂದೆ-ತಾಯಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದೆ. ಪಣಂಬೂರು ಠಾಣಾ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದರು. ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಸರಕಾರದ ಪರವಾಗಿ ವಾದಿಸಿದ್ದರು.
ಅಪ್ರಾಪ್ತ ಬಾಲಕಿ ಕೊಲೆಗೆ ಮುನ್ನಾ ದಿನ ನೆರೆಮನೆಯ ಮಹಿಳೆಯೊಬ್ಬರ ಫೋನ್ ಮೂಲಕ ತನ್ನ ತಾಯಿಗೆ ಕರೆ ಮಾಡಿ ಜ್ವರವಿರುವ ಬಗ್ಗೆ ಹೇಳಿದ್ದಳು. ಮರುದಿನ ತಾಯಿ ಕರೆ ಮಾಡಿ, ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಮಹಿಳೆ ಬಾಲಕಿ ಇರುವ ಮನೆಗೆ ಬಂದಾಗ ಆರೋಪಿ ಫಕೀರಪ್ಪ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ್ದು ಕಂಡಿತ್ತು. ಇದನ್ನು ನೋಡಿ ಮಹಿಳೆಯರು ಆತಂಕಿತರಾಗಿದ್ದು, ಆರೋಪಿ ಈ ವಿಷಯ ಯಾರಿಗೂ ಹೇಳದಂತೆ ಮಹಿಳೆಯರಿಗೆ ಬೆದರಿಸಿ ಅಲ್ಲಿಂದ ತೆರಳಿದ್ದ. ಕೋರ್ಟ್ ವಿಚಾರಣೆ ವೇಳೆ ಇಬ್ಬರು ಮಹಿಳೆಯರು ಘಟನೆಯ ಪ್ರತ್ಯಕ್ಷ ಸಾಕ್ಷಿ ಹೇಳಿದ್ದು ಪ್ರಮುಖವಾಗಿತ್ತು. ಉಳಿದಂತೆ ಆರೋಪಿ ಬಟ್ಟೆಯಲ್ಲಿದ್ದ ರಕ್ತ ಹಾಗೂ ಬಾಲಕಿ ರಕ್ತದ ಸ್ಯಾಂಪಲ್ ಹೋಲಿಕೆಯಾಗಿದೆ. ಬಾಲಕಿಯ ಮುಖದಲ್ಲಿದ್ದ ಗಾಯದ ಗುರುತು ಮತ್ತು ಆರೋಪಿಯ ಹಲ್ಲಿನ ಚಹರೆ ಹೋಲಿಕೆಯಾಗಿದೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 09:16 pm
Mangalore Correspondent
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm