ಬ್ರೇಕಿಂಗ್ ನ್ಯೂಸ್
17-09-25 12:25 pm Bangalore Correspondent ಕ್ರೈಂ
ಬೆಂಗಳೂರು, ಸೆ 17 : ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.
ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.
ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident in Banashankari, Bengaluru, an elderly woman was tied up and robbed of rs 8 lakh by her former driver and his accomplices, who posed as food delivery agents to gain entry into her house.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm