ಬ್ರೇಕಿಂಗ್ ನ್ಯೂಸ್
18-09-25 11:44 am HK News Desk ಕ್ರೈಂ
ಕಾಸರಗೋಡು, ಸೆ.18 : ಡೇಟಿಂಗ್ ಆ್ಯಪ್ ನಲ್ಲಿ ಪರಿಚಯವಾಗಿದ್ದ ಅಪ್ರಾಪ್ತ ಬಾಲಕನ ಮೇಲೆ ಸಲಿಂಗರತಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಬೇಕಲ ಉಪ ವಿಭಾಗ ಶಿಕ್ಷಣಾಧಿಕಾರಿ ಸಹಿತ ಹತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೇಕಲ ಉಪ ವಿಭಾಗದ ಶಿಕ್ಷಣಾಧಿಕಾರಿ ಸೈನುದ್ದೀನ್ ವಿ.ಕೆ. (52), ರೈಲ್ವೇ ಉದ್ಯೋಗಿ, ರಾಜ್ಯ ಮಟ್ಟದ ಫುಟ್ಬಾಲ್ ತರಬೇತಿದಾರ ಪಿಲಿಕೋಡ್ ನಿವಾಸಿ ಚಿತ್ರರಾಜ್ (48), ತ್ರಿಕರಿಪುರದ ವಲ್ಲಕಾಡ್ ಮೂಲದ ಜಮಾತೆ ಇಸ್ಲಾಮಿ ಕಾರ್ಯಕರ್ತ ಕುಂಞಹ್ಮದ್(55), ಪಿಲಿಕೋಡ್ ಪಂಚಾಯತಿ ವೆಲ್ಲಚಾಲ್ ನಿವಾಸಿ ಸುಕೇಶ್ (30), ಚಂದೇರಾ ನಿವಾಸಿ ಅಫ್ಸಲ್(23), ಚೀಮೇನಿ ನಿವಾಸಿ ಶಿಜಿತ್ (36), ತ್ರಿಕರಿಪುರದ ವಡಕೆ ಕೊವ್ವಲ್ನ ರಾಯೀಸ್ (30), ಪಡನ್ನಕ್ಕಾಡ್ನ ರಂಜಾನ್ (64) ಹಾಗೂ ಚೀಮೇನಿಯ ನಾರಾಯಣನ್ ಚಂಬ್ರಕಾನಂ (60) ಬಂಧಿತ ಆರೋಪಿಗಳಾಗಿದ್ದಾರೆ.

ಕಾಸರಗೋಡು, ಕಣ್ಣೂರು, ಕೋಝಿಕೋಡ್ ಮತ್ತು ಎರ್ನಾಕುಲಂ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ದಾಖಲಾಗಿರುವ 16 ಪ್ರಕರಣಗಳಲ್ಲಿ ಒಟ್ಟಾರೆಯಾಗಿ 16 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕ ವಯಸ್ಕರಿಗೆ ಮಾತ್ರ ನಿಗದಿಯಾಗಿದ್ದ ಡೇಟಿಂಗ್ ಆ್ಯಪ್ನಲ್ಲಿ ನೋಂದಾಯಿಸಿಕೊಂಡಿದ್ದು ತನಗೆ 18 ವರ್ಷ ಎಂದು ತೋರಿಸಿದ್ದ. ಆ್ಯಪ್ ಮೂಲಕ ಸಂಪರ್ಕ ಸಾಧಿಸಿದ್ದ 16 ಮಂದಿ ಈ ಬಾಲಕನ ಮೇಲೆ ಕಳೆದ ಎರಡು ವರ್ಷಗಳಿಂದ ಸಲಿಂಗರತಿ ದೌರ್ಜನ್ಯ ಎಸಗಿದ್ದಾರೆ.
ಚಂದೇರಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಂಟು ಪ್ರಕರಣಗಳಲ್ಲಿ ಹತ್ತು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಎರ್ನಾಕುಲಂ, ಕಣ್ಣೂರು, ಕೋಜಿಕ್ಕೋಡ್ ಜಿಲ್ಲೆಗಳಲ್ಲಿ ಆರು ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ತ್ರಿಕ್ಕರಿಪುರ ಮೂಲದ ಯುವ ಲೀಗ್ ನಾಯಕ ಸಿರಾಜುದ್ದೀನ್ ನಿರೀಕ್ಷಣ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾನೆ.
ಪ್ರಕರಣದಲ್ಲಿ ಬಂಧಿತರಾಗಿರುವ ಬೇಕಲ ಉಪಜಿಲ್ಲಾ ಶಿಕ್ಷಣಾಧಿಕಾರಿ ವಿ.ಕೆ.ಸೈನುದ್ದೀನ್ ಅವರನ್ನು ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಸೂಚನೆ ಮೇರೆಗೆ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪಡನ್ನಕ್ಕಾಡು ನಿವಾಸಿ ಸೈನುದ್ದೀನ್ನನ್ನು ಪೋಕ್ಸೋ ಕಾಯಿದೆಯಡಿ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಹೊಸದುರ್ಗ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆರೋಪಿಯನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದೇ ವೇಳೆ, ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರ್ಪಿಎಫ್ ಅಧಿಕಾರಿ ಚಿತ್ರರಾಜ್ ಬಂಧನ ಎಂಬ ಮಾಧ್ಯಮಗಳಲ್ಲಿ ಬಂದ ವರದಿ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ. ಆರೋಪಿ ಚಿತ್ರರಾಜ್ ಸೇವೆಯಲ್ಲಿರುವ ಆರ್ಪಿಎಫ್ ಅಧಿಕಾರಿಯಲ್ಲ ಮತ್ತು ರೈಲ್ವೆ ರಕ್ಷಣಾ ಪಡೆಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
ಇತ್ತೀಚೆಗೆ ಬಾಲಕನಲ್ಲಿ ಬದಲಾದ ನಡವಳಿಕೆ ಮತ್ತು ಅಪರಿಚಿತ ವ್ಯಕ್ತಿಗಳ ಸಂಪರ್ಕದಿಂದಾಗಿ ತಾಯಿ ಅನುಮಾನಗೊಂಡು ಪ್ರಶ್ನೆ ಮಾಡಿದ್ದರು. ಈ ವೇಳೆ, ಬಾಲಕ ತನ್ನನ್ನು ಹಲವಾರು ಲೈಂಗಿಕ ದೌರ್ಜನ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಹೇಳಿದ್ದು ಇದರಂತೆ ತಾಯಿ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಾಗಿದೆ.
A shocking case of child sexual abuse has rocked Kasargod, where police have arrested 10 individuals, including a sub-divisional education officer, a railway employee, a football coach, and political workers linked to Jamaat-e-Islami and the Muslim League.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm