ಬ್ರೇಕಿಂಗ್ ನ್ಯೂಸ್
20-09-25 05:11 pm Mangalore Correspondent ಕ್ರೈಂ
ಮಂಗಳೂರು, ಸೆ.20 : ಇತ್ತೀಚೆಗೆ ಬಂಟ್ವಾಳ ತಾಲೂಕಿನ ತುಂಬೆ ಮತ್ತು ಉಪ್ಪಿನಂಗಡಿಯ ಪೆರ್ನೆಯಲ್ಲಿ ಹಟ್ಟಿಯಿಂದ ದನಗಳನ್ನು ಕದ್ದೊಯ್ದು ಮಾಂಸ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತುಂಬೆ ಬಳಿ ಮನೆಯ ಹಟ್ಟಿಯಿಂದ ಗೋವನ್ನು ಕದ್ದು ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಆ.15ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂಬವರನ್ನು ಸೆ.5ರಂದು ದಸ್ತಗಿರಿ ಮಾಡಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಇದೇ ಆರೋಪಿಗಳು ಸೆ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲು ಮನೆಯೊಂದರ ಹಟ್ಟಿಯಿಂದ ಸಾಕು ದನವನ್ನು ಕದ್ದು ಅಲ್ಲಿಯೇ ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ತನಿಖೆ ಸಂದರ್ಭದಲ್ಲಿ ಎರಡೂ ಕೃತ್ಯಗಳನ್ನು ಒಂದೇ ತಂಡ ನಡೆಸಿರುವುದು ಕಂಡುಬಂದಿತ್ತು. ಎರಡಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದರೆ ಅಂಥವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ದ.ಕ. ಎಸ್ಪಿ ಅರುಣ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Police have invoked the Karnataka Control of Organised Crimes Act (KCOCA) against individuals accused in recent cases of cattle theft and illegal slaughter in Tumbe and Uppinangady areas of Bantwal taluk.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am