ಬ್ರೇಕಿಂಗ್ ನ್ಯೂಸ್
20-09-25 05:11 pm Mangalore Correspondent ಕ್ರೈಂ
ಮಂಗಳೂರು, ಸೆ.20 : ಇತ್ತೀಚೆಗೆ ಬಂಟ್ವಾಳ ತಾಲೂಕಿನ ತುಂಬೆ ಮತ್ತು ಉಪ್ಪಿನಂಗಡಿಯ ಪೆರ್ನೆಯಲ್ಲಿ ಹಟ್ಟಿಯಿಂದ ದನಗಳನ್ನು ಕದ್ದೊಯ್ದು ಮಾಂಸ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತುಂಬೆ ಬಳಿ ಮನೆಯ ಹಟ್ಟಿಯಿಂದ ಗೋವನ್ನು ಕದ್ದು ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಆ.15ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂಬವರನ್ನು ಸೆ.5ರಂದು ದಸ್ತಗಿರಿ ಮಾಡಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಇದೇ ಆರೋಪಿಗಳು ಸೆ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲು ಮನೆಯೊಂದರ ಹಟ್ಟಿಯಿಂದ ಸಾಕು ದನವನ್ನು ಕದ್ದು ಅಲ್ಲಿಯೇ ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ತನಿಖೆ ಸಂದರ್ಭದಲ್ಲಿ ಎರಡೂ ಕೃತ್ಯಗಳನ್ನು ಒಂದೇ ತಂಡ ನಡೆಸಿರುವುದು ಕಂಡುಬಂದಿತ್ತು. ಎರಡಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದರೆ ಅಂಥವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ದ.ಕ. ಎಸ್ಪಿ ಅರುಣ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Police have invoked the Karnataka Control of Organised Crimes Act (KCOCA) against individuals accused in recent cases of cattle theft and illegal slaughter in Tumbe and Uppinangady areas of Bantwal taluk.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm