ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm