ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm