ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm