ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm