ಬ್ರೇಕಿಂಗ್ ನ್ಯೂಸ್
28-09-25 04:57 pm Udupi Correspondent ಕ್ರೈಂ
ಉಡುಪಿ, ಸೆ.28 : ಎಕೆಎಂಎಸ್ ಬಸ್ ಮಾಲಕ, ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು. ಶನಿವಾರ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನ ಸಾಲ್ಮರದಲ್ಲಿ ಸೈಫುದ್ದೀನ್ ಅವರನ್ನು ಹತ್ಯೆ ಮಾಡಲಾಗಿತ್ತು. ಸೈಫುದ್ದೀನ್ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಅವರ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿದ್ದರೆಂದು ತಿಳಿದುಬಂದಿತ್ತು.


ಮನೆಯ ಹೊರಗೆ ಅಂಗಳದಲ್ಲಿ ಮಚ್ಚಿನಿಂದ ಯದ್ವಾತದ್ವಾ ಕಡಿದು ಹಾಕಿದ್ದು ಸ್ಥಳದಲ್ಲಿಯೇ ಜೀವ ಹೋಗಿತ್ತು. ಸಂಪೂರ್ಣ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೃತದೇಹವನ್ನು ಪೊಲೀಸರು ಆಸ್ಪತ್ರೆಗೆ ರವಾನಿಸಿದ್ದರು. ಉಡುಪಿ ಮತ್ತು ಹಿರಿಯಡ್ಕ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಸೈಫ್ ಮೇಲೆ ಕೊಲೆ, ಕೊಲೆಯತ್ನ ಸೇರಿ 18 ಕೇಸುಗಳಿದ್ದವು. ಖಾಸಗಿ ಬಸ್ಸನ್ನು ಪಾಲುದಾರಿಕೆಯಲ್ಲಿ ನಡೆಸುತ್ತಿದ್ದ ಎನ್ನಲಾಗುತ್ತಿದ್ದು ಮಣಿಪಾಲದಲ್ಲಿ ಕುಟುಂಬದ ಜತೆ ವಾಸವಾಗಿದ್ದ. ಈತನಿಗೆ ಕುಕ್ಕಿಕಟ್ಟೆಯ ನಿವಾಸಿ ಫೈಜಲ್ ಖಾನ್ ಮತ್ತು ದೊಡ್ಡಣಗುಡ್ಡೆ ನಿವಾಸಿ ಶರೀಫ್ ಹತ್ತಿರದ ಸ್ನೇಹಿತರಾಗಿದ್ದರು. ಸೈಫ್ನ ಮನೆಗೆ ಶನಿವಾರ ಬೆಳಗ್ಗೆ ಆಗಮಿಸಿದ್ದ ಫೈಜಲ್ ಖಾನ್, ಬಸ್ನ ವ್ಯವಹಾರದ ಕುರಿತು ಮಾತನಾಡಲು ಮಂಗಳೂರಿಗೆ ಹೋಗೋಣ ಎಂದು ಹೇಳಿ ಮಣಿಪಾಲದ ಕಾಯಿನ್ ಸರ್ಕಲ್ ಬಳಿ ಇರುವ ಮನೆಯ ಬಳಿಯಿಂದ ಅವನ ಕಾರಿನಲ್ಲಿ ತೆರಳಿದ್ದರು. ಆದರೆ ಇದರ ನಡುವೆಯೇ ಕಾರು ಮಲ್ಪೆ ಕಡೆಗೆ ತಿರುಗಿದ್ದು ಸಾಲ್ಮರದಲ್ಲಿ ಹೊಸ ಮನೆಯ ಎದುರಲ್ಲಿ ನಿಂತಿತ್ತು.
ಸ್ನೇಹಿತರಾದ ಫೈಜಲ್ ಖಾನ್ ಮತ್ತು ಶರೀಫ್ ಇತರರೊಂದಿಗೆ ಸೇರಿಕೊಂಡು ಸೈಫ್ ಮೇಲೆ ಹಲ್ಲೆಗೈದು ಕೊಂದು ಮುಗಿಸಿದ್ದಾರೆ. ಇವರ ನಡುವೆ ಹಣಕಾಸು ದ್ವೇಷ ಇತ್ತೇ, ಅದೇ ಕಾರಣಕ್ಕೆ ಕೃತ್ಯ ಆಗಿದೆಯೇ ಅಥವಾ ಹಳೆಯ ಕೇಸಿಗೆ ಪ್ರತೀಕಾರಕ್ಕಾಗಿ ಕೊಂದಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಲ್ಲುವ ಉದ್ದೇಶದಿಂದ ಸ್ನೇಹಿತರೇ ಮಲ್ಪೆಗೆ ಕರೆದುಕೊಂಡು ಹೋಗಿ ಕೊಲೆಗೈದು ಪರಾರಿಯಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೈಫುದ್ದೀನ್ ಅವರ ಮಗ ದೂರು ನೀಡಿದ್ದಾರೆ.
Udupi police have arrested three men within 24 hours in connection with the murder of Saifuddin, a bus operator and rowdy-sheeter facing 18 criminal cases.Saifuddin was hacked to death with machetes on Saturday at his newly purchased house in Kodavoor, allegedly by close friends Muhammad Faisal Khan (27), Muhammad Sharif (37), and Abdul Shukoor alias Addu (43).
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 06:38 pm
Giridhar Shetty, Mangaluru Staffer
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm