ಬ್ರೇಕಿಂಗ್ ನ್ಯೂಸ್
28-09-25 05:04 pm Mangalore Correspondent ಕ್ರೈಂ
ಮಂಗಳೂರು, ಸೆ.28 : ವಾಟ್ಸಪ್ ಮೆಸೇಜ್ ನಂಬಿ ನಕಲಿ ಷೇರು ಮಾರುಕಟ್ಟೆಯ ಲಿಂಕ್ ಕ್ಲಿಕ್ ಮಾಡಿ ಹಣ ಡಬಲ್ ಮಾಡಲು ಹೋದ ಮಹಿಳೆಯೊಬ್ಬರು 15 ದಿನದಲ್ಲಿ ಬರೋಬ್ಬರಿ 45 ಲಕ್ಷ ರು. ಕಳಕೊಂಡಿದ್ದು ಮೋಸ ತಿಳಿಯುತ್ತಿದ್ದಂತೆ ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ದೂರುದಾರೆ ಮಹಿಳೆಗೆ ಕಳೆದ ಆಗಸ್ಟ್ ನಲ್ಲಿ ಷೇರ್ ಮಾರ್ಕೆಟ್ ಎಂದು ಹೇಳಿ ಲಿಂಕ್ ಬಂದಿತ್ತು. ಲಿಂಕ್ ಕ್ಲಿಕ್ ಮಾಡಿದ ವೇಳೆ F9 Indian Market Forum ಎಂಬ ವಾಟ್ಸಪ್ ಗ್ರೂಪ್ (ಗ್ರೂಪ್ ನ ಅಡ್ಮಿನ್ Jass singh 8597164645, Jinal viral mehta 7619640978, +447352579985, 7659855761) ಓಪನ್ ಆಗಿತ್ತು. ಸದ್ರಿ ಗ್ರೂಪ್ ನಲ್ಲಿ ಸ್ಟಾಕ್ ಮಾರ್ಕೆಟ್ ಬಗ್ಗೆ ಜಾಹೀರಾತನ್ನು ನೀಡಿ, ಇನ್ ವೆಸ್ಟ್ ಮೆಂಟ್ ಬಗ್ಗೆ ಆಸಕ್ತಿಯಿದ್ದರೆ “CERBER INV” ಎಂಬ ಆಪ್ ನಲ್ಲಿ ನೊಂದಾಯಿಸುವಂತೆ ಸೂಚಿಸಿದ್ದರು. ಸದ್ರಿ ಲಿಂಕ್ ಮುಖಾಂತರ ತನ್ನ ಹೆಸರು, ಮೊಬೈಲ್ ನಂಬ್ರ ಮತ್ತು ಇಮೇಲ್ ಐ.ಡಿ.ಯನ್ನು ಸದ್ರಿ ಆಪ್ ನಲ್ಲಿ ನೊಂದಾಯಿಸಿದ್ದರು.

ಆನಂತರ, ಈ ಹಿಂದೆ ಇದ್ದ ವಾಟ್ಸಪ್ ಗ್ರೂಪ್ ನಿಂದ ತೆಗೆದು “Investment Alliance Elite Group B3” ನೇ ವಾಟ್ಸಪ್ ಗ್ರೂಪ್ ಸೇರಿಸಲಾಗಿತ್ತು. ಸದ್ರಿ ಗ್ರೂಪ್ ನಲ್ಲಿ ಶೇರ್ ಮಾರ್ಕೆಟಿಂಗ್ ಸ್ಟಾಕ್ಸ್ & ಇನ್ ವೆಸ್ಟ್ ಮೆಂಟ್ ಬಗ್ಗೆ ವಿವರಿಸುತ್ತ ಹೆಚ್ಚಿನ ಲಾಭ ಗಳಿಸಲು ಹೂಡಿಕೆ ಮಾಡಲು ಹೇಳುತ್ತಿದ್ದರು. ರಿಚಾರ್ಜ್ ಮಾಡುವುದಕ್ಕಾಗಿ ಅಡ್ಮಿನ್ ಮ್ಯಾನೇಜರ್ ರಿಯಾ ಎಂಬವರನ್ನು ಸಂಪರ್ಕಿಸಿ ಎಂದು +1(307)412-4480 ನೇ ನಂಬರ್ ನೀಡಿದ್ದು ಸದ್ರಿ ರಿಯಾ ಹೇಳಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಮಹಿಳೆ ತನ್ನ ಖಾತೆಯಿಂದ ಹಣ ಹಾಕಿದ್ದರು. ಅದರಂತೆ ಸೆ.9ರಿಂದ 25ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 45,10,000/- ರೂ. ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ IMPS & RTGS ಹಾಗು UPI ಮೂಲಕ ವರ್ಗಾವಣೆ ಮಾಡಿದ್ದು ಮತ್ತೆ 33 ಲಕ್ಷ ಪಾವತಿಸಲು ಒತ್ತಾಯಿಸಿದ್ದರು. ಅಷ್ಟರಲ್ಲಿ ಅನುಮಾನಗೊಂಡ ಮಹಿಳೆ ತನ್ನ ಹಿಂದಿನ ಮೊತ್ತ ನೀಡುವಂತೆ ಸದ್ರಿ ವಾಟ್ಸಪ್ ಗ್ರೂಪ್ ನಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ಸ್ವೀಕರಿಸದೆ ಮೋಸ ಮಾಡಿದ್ದರು.
A woman from Mangaluru lost ₹45 lakh in just 15 days after falling prey to a fake stock market scam promoted through WhatsApp messages.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm