ಬ್ರೇಕಿಂಗ್ ನ್ಯೂಸ್
01-10-25 02:39 pm Mangalore Correspondent ಕ್ರೈಂ
ಮಂಗಳೂರು, ಅ.1 : ಸಾಮಾಜಿಕ ಜಾಲತಾಣದಲ್ಲಿ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಈ ಷೇರಿನಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ಪ್ರಚಾರ ಮಾಡುವ ವಿಡಿಯೋ ನೋಡಿ ನಿಜವೆಂದು ನಂಬಿದ ಮಂಗಳೂರಿನ ಮಹಿಳೆಯೊಬ್ಬರು 9.10 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ನಗರದ ಉರ್ವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.26ರಂದು ಮಹಿಳೆ ಫೇಸ್ಬುಕ್ ನೋಡುತ್ತಿದ್ದಾಗ ಸುಧಾಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಬಗ್ಗೆ ಪ್ರಚಾರ ಮಾಡುವ ಎಐ ವಿಡಿಯೋ ನೋಡಿದ್ದಾರೆ. ವಿಡಿಯೋದಲ್ಲಿ ಈ ಷೇರಿನಲ್ಲಿ ಹಣ ಹೂಡಿದರೆ ನಿಮ್ಮ ಹಣ ಡಬಲ್ ಆಗೋದು ಖಚಿತ, ಇದಕ್ಕೆ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ ಎಂಬಿತ್ಯಾದಿಯಾಗಿ ಜನರನ್ನು ನಂಬಿಸುವ ರೀತಿ ವಿಡಿಯೋಗಳಿದ್ದವು.
ಇದನ್ನು ನಂಬಿದ ಮಹಿಳೆ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತನ್ನ ಹೆಸರು ನೋಂದಣಿ ಮಾಡಿದ್ದಾರೆ. ಅದೇ ದಿನ ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಹೂಡಿಕೆ ಮಾಡಲು 20,664 ರೂ. ಹಣ ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಮಹಿಳೆ ಹಣ ಡಿಕೆ ಪಾವತಿಸಿದ್ದಾರೆ.
ಆನಂತರ ವ್ಯಕ್ತಿ ತಿಳಿಸಿದಂತೆ ಆ ಕಂಪನಿಯ ವೆಬ್ಸೈಟ್ನಲ್ಲಿ ಲಾಗಿನ್ ಕೂಡ ಆಗಿದ್ದಾರೆ. ಅದೇ ದಿನ ಇನ್ನೊಬ್ಬ ಅಪರಿಚಿತ ವ್ಯಕ್ತಿ ಮೆಸೇಜ್ ಮತ್ತು ಕರೆ ಮಾಡಿ ಹೂಡಿಕೆ ಮೂಲಕ ಹೆಚ್ಚು ಹಣ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ಅದರಂತೆ, ಡಬಲ್ ಆಗುತ್ತೆ ಎಂಬ ನಂಬಿಕೆಯಲ್ಲಿ 8.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 9,10,664 ರೂ. ಹೂಡಿಕೆ ಮಾಡಿದ್ದು ಬಳಿಕ ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟಬೇಕು ಎಂದು ಹೇಳಿದ್ದು ಮಹಿಳೆ ತಾನು ಮೋಸ ಹೋಗಿರುವ ಶಂಕೆ ಉಂಟಾಗಿದೆ. ಇದರಿಂದ ಮಹಿಳೆ ಪೊಲೀಸ್ ದೂರು ನೀಡಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
A woman from Mangaluru lost ₹9.10 lakh after believing an AI-generated video circulating on Facebook that used the names of Infosys Foundation’s Sudha Murty and Union Finance Minister Nirmala Sitharaman. The video falsely claimed that investments in a certain scheme would double with government guarantee.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm