ಬ್ರೇಕಿಂಗ್ ನ್ಯೂಸ್
01-10-25 02:39 pm Mangalore Correspondent ಕ್ರೈಂ
ಮಂಗಳೂರು, ಅ.1 : ಸಾಮಾಜಿಕ ಜಾಲತಾಣದಲ್ಲಿ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಈ ಷೇರಿನಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ಪ್ರಚಾರ ಮಾಡುವ ವಿಡಿಯೋ ನೋಡಿ ನಿಜವೆಂದು ನಂಬಿದ ಮಂಗಳೂರಿನ ಮಹಿಳೆಯೊಬ್ಬರು 9.10 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ನಗರದ ಉರ್ವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.26ರಂದು ಮಹಿಳೆ ಫೇಸ್ಬುಕ್ ನೋಡುತ್ತಿದ್ದಾಗ ಸುಧಾಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಬಗ್ಗೆ ಪ್ರಚಾರ ಮಾಡುವ ಎಐ ವಿಡಿಯೋ ನೋಡಿದ್ದಾರೆ. ವಿಡಿಯೋದಲ್ಲಿ ಈ ಷೇರಿನಲ್ಲಿ ಹಣ ಹೂಡಿದರೆ ನಿಮ್ಮ ಹಣ ಡಬಲ್ ಆಗೋದು ಖಚಿತ, ಇದಕ್ಕೆ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ ಎಂಬಿತ್ಯಾದಿಯಾಗಿ ಜನರನ್ನು ನಂಬಿಸುವ ರೀತಿ ವಿಡಿಯೋಗಳಿದ್ದವು.
ಇದನ್ನು ನಂಬಿದ ಮಹಿಳೆ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತನ್ನ ಹೆಸರು ನೋಂದಣಿ ಮಾಡಿದ್ದಾರೆ. ಅದೇ ದಿನ ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಹೂಡಿಕೆ ಮಾಡಲು 20,664 ರೂ. ಹಣ ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಮಹಿಳೆ ಹಣ ಡಿಕೆ ಪಾವತಿಸಿದ್ದಾರೆ.
ಆನಂತರ ವ್ಯಕ್ತಿ ತಿಳಿಸಿದಂತೆ ಆ ಕಂಪನಿಯ ವೆಬ್ಸೈಟ್ನಲ್ಲಿ ಲಾಗಿನ್ ಕೂಡ ಆಗಿದ್ದಾರೆ. ಅದೇ ದಿನ ಇನ್ನೊಬ್ಬ ಅಪರಿಚಿತ ವ್ಯಕ್ತಿ ಮೆಸೇಜ್ ಮತ್ತು ಕರೆ ಮಾಡಿ ಹೂಡಿಕೆ ಮೂಲಕ ಹೆಚ್ಚು ಹಣ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ಅದರಂತೆ, ಡಬಲ್ ಆಗುತ್ತೆ ಎಂಬ ನಂಬಿಕೆಯಲ್ಲಿ 8.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 9,10,664 ರೂ. ಹೂಡಿಕೆ ಮಾಡಿದ್ದು ಬಳಿಕ ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟಬೇಕು ಎಂದು ಹೇಳಿದ್ದು ಮಹಿಳೆ ತಾನು ಮೋಸ ಹೋಗಿರುವ ಶಂಕೆ ಉಂಟಾಗಿದೆ. ಇದರಿಂದ ಮಹಿಳೆ ಪೊಲೀಸ್ ದೂರು ನೀಡಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
A woman from Mangaluru lost ₹9.10 lakh after believing an AI-generated video circulating on Facebook that used the names of Infosys Foundation’s Sudha Murty and Union Finance Minister Nirmala Sitharaman. The video falsely claimed that investments in a certain scheme would double with government guarantee.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm